ನಾಳೆ (ಅ.22) ಮಜ್ಜಾರಡ್ಕದಲ್ಲಿ ರಕ್ತದಾನ ಶಿಬಿರ, ನೇತ್ರ ತಪಾಸಣೆ, ಸನ್ಮಾನ, ಸಹಾಯಧನ ವಿತರಣೆ

0

ಪುತ್ತೂರು: ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗದ ವತಿಯಿಂದ ದಿ.ಜಯಂತಿ ಮಜ್ಜಾರ್ ಇವರ ಸ್ಮರಣಾರ್ಥ 6 ನೇ ವರ್ಷದ ಕೆಸರುಡೊಂಜಿ ದಿನ ಕಾರ್ಯಕ್ರಮದ ಅಂಗವಾಗಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಕಾರದೊಂದಿಗೆ ರಕ್ತದಾನ ಶಿಬಿರ, ಸನ್ಮಾನ, ಸಹಾಯಧನ ವಿತರಣೆ, ಕೆಸರುಡೊಂಜಿ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ವಿಭಾಗ ಮಂಗಳೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೇಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ, ಪ್ರಾಥಮಿಕ ಆರೋಗ್ಯ ಕೇಂದ್ರ ತಿಂಗಳಾಡಿ ಇದರ ವತಿಯಿಂಧ ಉಚಿತ ಬಿಪಿ, ಶುಗರ್ ತಪಾಸಣಾ ಶಿಬಿರ ಅ.22 ರಂದು ಬೆಳಿಗ್ಗೆ ಅರಿಯಡ್ಕ ಗ್ರಾಮದ ಮಜ್ಜಾರಡ್ಕದಲ್ಲಿ ನಡೆಯಲಿದೆ. ಶಿಬಿರವು ಬೆಳಿಗ್ಗೆಯಿಂದ ಮಧ್ಯಾಹ್ನದ ತನಕ ಮಾತ್ರ ನಡೆಯಲಿದೆ. ಶಿಬಿರದಲ್ಲಿ ಕನ್ನಡಕ ಅಗತ್ಯವುಳ್ಳವರಿಗೆ ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ ನಡೆಯಲಿದೆ. ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here