ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಆಯುಧ ಪೂಜಾ, ಭಕ್ತಿ ರಸಮಂಜರಿ

0

ಬಡಗನ್ನೂರುಃ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅಯುಧ ಪೂಜಾ ಸಮಿತಿ ವತಿಯಿಂದ  ಆಯುಧ ಪೂಜಾ ಕಾರ್ಯಕ್ರಮ ಅ.21 ರಂದು ನಡೆಯಿತು.ಬೆಳಗ್ಗೆ ಶ್ರೀ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರಿಗೆ ವಿಶೇಷ ಪೂಜೆ ನಡೆದು 8.30 ರಿಂದ  ವಾಹನ ಪೂಜೆ ಕಾರ್ಯಕ್ರಮ ನಡೆಯಿತು.  ಸುಮಾರು 100ಕ್ಕೂ ಹೆಚ್ಚು ವಾಹನಗಳಿಗೆ ಪೂಜೆ ನಡೆಯಿತು.12 .30 ರಿಂದ ಶ್ರೀ ದೇವರಿಗೆ ಮಹಾಪೂಜೆ ಪ್ರಸಾದ ವಿತರಣೆ  ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

ಭಕ್ತಿರಸಮಂಜರಿ ಕಾರ್ಯಕ್ರಮ:-
ಅಯುಧ ಪೂಜಾ ಅಂಗವಾಗಿ  ಪುತ್ತೂರು ಪುನೀತ್  ರಸಮಂಜರಿ ತಂಡದವರಿಂದ  ಭಕ್ತಿ ರಸಮಂಜರಿ  ಕಾರ್ಯಕ್ರಮ ನಡೆಯಿತು..

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಜ್ ರೈ ಪೇರಾಲು, ಅಯುಧ ಪೂಜಾ ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ ಮಂಗಳಾದೇವಿ, ನವರಾತ್ರಿ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಳ್ವ,  ಉತ್ಸವ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಬಸವಹಿತ್ಲಿಲು, ಅಯುಧ ಪೂಜಾ ಸಮಿತಿ ಕಾರ್ಯದರ್ಶಿ ಸುಬ್ಬಯ್ಯ ರೈ ಹಲಸಿನಡಿ ಹಾಗೂ ಸಮಿತಿ ಸದಸ್ಯರು ಮತ್ತು ಊರಿನವರು. ಉಪಸ್ಥಿತರಿದ್ದರು.ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಸತೀಶ್ ರೈ ಕಟ್ಟಾವು  ಕಾರ್ಯಕ್ರಮದ ನಿರೂಪಣೆ ಮಾಡಿದರು.

LEAVE A REPLY

Please enter your comment!
Please enter your name here