ಪಡುಮಲೆ ಮದಕ ರಾಜರಾಜೇಶ್ವರಿ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವ

0

ಬಡಗನ್ನೂರುಃ ಪಡುಮಲೆ ಮದಕ  ಶ್ರೀ ರಾಜರಾಜೇಶ್ವರಿ ಸಾನಿಧಿಯಲ್ಲಿ ನವರಾತ್ರಿ ಮಹೋತ್ಸವ ಅಂಗವಾಗಿ ಶ್ರೀ ಕೃಷ್ಣ ಭಜನಾ ಮಂದಿರದ ಸದಸ್ಯರಿಂದ ಭಜನಾ ಕಾರ್ಯಕ್ರಮ ಅ.21 ರಂದು ನಡೆಯಿತು.ಬಳಿಕ ರಾಜರಾಜೇಶ್ವರಿ ದೇವಿಗೆ ಹೂವಿನ ಅಲಂಕಾರ ಪೂಜೆ, ಮಹಾ ಮಂಗಳಾರತಿ ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಜ್ ರೈ ಪೇರಾಲು, ನವರಾತ್ರಿ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಳ್ವ, ಕಾರ್ಯದರ್ಶಿ ಸುಬ್ಬಯ್ಯ ರೈ ಹಲಸಿನಡಿ, , ಅಯುಧ ಪೂಜಾ ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ ಮಂಗಳಾದೇವಿ, ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಸುರೇಶ್ ಪಲ್ಲತ್ತಾರು, ಕೋಶಾಧಿಕಾರಿ ರಾಜೇಶ್ ಮೇಗಿನಮನೆ, ಉತ್ಸವ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಬಸವಹಿತ್ಲಿಲು, ಅನಂತ ರೈ ಮೂಡಾಯೂರು, ಪದ್ಮನಾಭ ರೈ ಅರೆಪ್ಪಾಡಿ, ರಘರಾಮ ಪಾಟಾಳಿ  ಪುರಂದರ  ರೈ ಸೇನರಮಜಲು, ಸುಳ್ಯಪದವು ಶ್ರೀ ಅಯ್ಯಪ್ಪ ಭಜನಾ ಮ‌ಂದಿರದ ಟ್ರಸ್ಟ್ ನ ಕೋಶಾಧಿಕಾರಿ ಚಿನ್ನಪ್ಪ ಗೌಡ ಶಬರಿನಗರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here