ಗಡಿಪಿಲ: ರಿಕ್ಷಾ-ದ್ವಿಚಕ್ರ ವಾಹನ ಅಪಘಾತ – ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

0

ಪುತ್ತೂರು: ನರಿಮೊಗರು ಗ್ರಾಮದ ಗಡಿಪಿಲ ಎಂಬಲ್ಲಿ ರಿಕ್ಷಾ – ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ.
ನರಿಮೊಗರು ಗ್ರಾಮದ ಗಡಿಪಿಲ ಎಂಬಲ್ಲಿ ಬಿ. ಸಿರಾಜ್ ಎಂಬವರು ಚಲಾಯಿಸುತ್ತಿದ್ದ ರಿಕ್ಷಾ ಹಾಗೂ ಸನ್ಮಿತ್ ಟಿ.ಎಂಬವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿದೆ.
ಪರಿಣಾಮ ಸ್ಕೂಟರ್ ಸವಾರ ಸವಣೂರು ಸಮೀಪದ ತೆಕ್ಕಿತಡಿ ನಿವಾಸಿ ಸನ್ಮಿತ್ ಟಿ. ಸ್ಕೂಟರಿನೊಂದಿಗೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here