ಪುತ್ತೂರು ಶಾರದೋತ್ಸವ: 8ನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮ

0

ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ 8ನೇ ದಿನದ ಸಾಂಸ್ಕೃತಿಕ ಅ.22ರಂದು ಸಂಜೆ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಿಕಟಪೂರ್ವ ನಗರಸಭಾಧ್ಯಕ್ಷ ಜೀವಂಧರ್ ಜೈನ್ ಹಾಗೂ ಬಲ್ನಾಡು ದಂಡನಾಯಕ ಉಳ್ಳಾಳ್ತಿ ದೇವಸ್ಥಾನದ ಮಾಜಿ ಅಧ್ಯಕ್ಷ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ದೀಪ ಪ್ರಜ್ವಲನದ ಮೂಲಕ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಭಾ,ಜ,ಪ, ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಭಾ,ಜ,ಪ, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಶಾರದಾ ಭಜನಾ ಮಂದಿರದ ಅಧ್ಯಕ್ಷ ಸಾಯಿರಾಮ ರಾವ್, ಉತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಬನ್ನೂರು, ಮಂದಿರದ ಕಾರ್ಯದರ್ಶಿ ಜಯಂತ್ ಉಲಾಂಡಿ, ಕೋಶಾಧಿಕಾರಿ ತಾರನಾಥ್ ಎಚ್, ಯಶವಂತ ಆಚಾರ್ಯ, ಕರಸೇವಕ ಪ್ರಮುಖ್ ಸುಧೀರ್ ಕಲ್ಲಾರೆ, ಪಕೀರ ಗೌಡ ಮೊದಲಾದವರು ಉಪಸ್ಥಿತರಿದ್ದರು. ಉತ್ಸವ ಸಮಿತಿ ಸಂಚಾಲಕ ಪಿ.ಜಿ. ಜಗನ್ನಿವಾಸ ರಾವ್ ಕಾರ್ಯಕ್ರಮ ನಿರ್ವಹಿಸಿದರು.ಬಳಿಕ ಹರಿಣಿ ಗೌಡ- ಕರಣ್ ಗೌಡ ತಂಡದವರಿಂದ “ಒಂದು ಬಾರಿ ಸ್ಮರಣೆ ಸಾಲದೇ” ಭಕ್ತಿಗಾನ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here