ಕೆಯ್ಯೂರು ದೇವಸ್ಥಾನದಲ್ಲಿ ನೃತ್ಯೋಪಾಸನಾ ಕಲಾ ಕೇಂದ್ರದಿಂದ ‘ನೃತ್ಯೋಹಂ’ ಕಾರ್ಯಕ್ರಮ

0

ಪುತ್ತೂರು: ಪುತ್ತೂರು ತಾಲೂಕಿನ ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅ.21ರಂದು ನವರಾತ್ರಿ ಮಹೋತ್ಸವದ ಅಂಗವಾಗಿ ‘ನೃತ್ಯೋಹಂ’ ಭರತನಾಟ್ಯ ಕಾರ್ಯಕ್ರಮ ನಡೆಯಿತು. ಪುತ್ತೂರಿನ ನೃತ್ಯೋಪಾಸನಾ ಕಲಾ ಕೇಂದ್ರದ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ನಿರ್ದೇಶನದಲ್ಲಿ ಕಲಾ ಕೇಂದ್ರದ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ನೀಡಿದರು.

ಅಭಿನವ ಕೇಸರಿ ಫ್ರೆಂಡ್ಸ್ ಕ್ಲಬ್ ಹಾಗೂ ಮೋಹನ ಎರೆಕಳ ಮತ್ತು ರೇಖಾ ದಂಪತಿ ಕಾರ್ಯಕ್ರಮ ಪ್ರಾಯೋಗಿಸಿದ್ದರು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಶಶಿಧರ ರಾವ್ ಬೋಳಿಕಳ ಕಲಾವಿದರಿಗೆ ಗೌರವಾರ್ಪಣೆ ಮಾಡಿದರು.

LEAVE A REPLY

Please enter your comment!
Please enter your name here