ಪುತ್ತೂರು ಶಾರದೋತ್ಸವ: ಶೋಭಾಯಾತ್ರೆ ಯಶಸ್ಸಿಗೆ ದೇವಳದಲ್ಲಿ ಪ್ರಾರ್ಥನೆ

0

ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ 89ನೇ ವರ್ಷದ ನವರಾತ್ರಿ ಉತ್ಸವ, ಶಾರದೋತ್ಸವದ ಶೋಭಾಯಾತ್ರೆ ಅ.24ರಂದು ಸಂಜೆ ನಡೆಯಲಿದ್ದು, ಆ ಪ್ರಯುಕ್ತ ಉತ್ಸವ ಸಮಿತಿ, ಶಾರದಾ ಭಜನಾ ಮಂದಿರದ ಸಮಿತಿ ವತಿಯಿಂದ ಅ.24ರಂದು ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ದೇವಸ್ಥಾನದ ಮುಖ್ಯ ಅರ್ಚಕ ವಸಂತ ಕೆದಿಲಾಯರವರು ಪ್ರಾರ್ಥನೆ ಸಲ್ಲಿಸಿದರು.
ಶೋಭಾಯಾತ್ರೆ ಸಂಚಾಲಕ ಸೀತಾರಾಮ ರೈ ಕೆದಂಬಾಡಿಗುತ್ತು, ಉತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಬನ್ನೂರು, ಭಜನಾ ಮಂದಿರದ ಅಧ್ಯಕ್ಷ ಸಾಯಿರಾಮ ರಾವ್, ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಉತ್ಸವ ಸಮಿತಿ ಕಾರ್ಯದರ್ಶಿ ಅಜಿತ್ ರೈ ಹೊಸಮನೆ, ಎಬಿವಿಪಿ ಜಿಲ್ಲಾ ಮಾಜಿ ಅಧ್ಯಕ್ಷ ವಿನಾಯಕ್ ಕುಂಬ್ರ, ವಿಕಾಸ್ ಪಿ., ಜಯಕಿರಣ್, ಗೋಪಾಲಕೃಷ್ಣ ಈಶಾ, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here