ಬೆಳಂದೂರು ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ

0

ಕಾಣಿಯೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಕಡಬ ಮತ್ತು ಗ್ರಾಮ ಪಂಚಾಯತ್ ಬೆಳಂದೂರು ಇವುಗಳ ಜಂಟಿ ಆಶ್ರಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅ.2ರಿಂದ ಅ.31ರ ವರೆಗೆ ನಡೆಯುವ “ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ” ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಮಾಹಿತಿ ನೀಡುವ ಮೂಲಕ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷರಾದ ಪಾರ್ವತಿ ಮರಕ್ಕಡ, ಉಪಾಧ್ಯಕ್ಷರಾದ ಜಯಂತ ಅಬೀರ, ಸದಸ್ಯರಾದ ಉಮೇಶ್ವರಿ ಅಗಳಿ, ಲೋಹಿತಾಕ್ಷ ಕೆಡೆಂಜಿಕಟ್ಟ, ವಿಠಲ ಗೌಡ ಅಗಳಿ,ಗೀತಾ ಕುವೆತ್ತೋಡಿ, ಹರಿಣಾಕ್ಷಿ ಬನಾರಿ, ಕುಸುಮಾ ಅಂಕಜಾಲು, ಗೌರಿ ಮಾದೋಡಿ, ಪ್ರವೀಣ್ ಕೆರೆನಾರು, ತಾರಾ ಆನ್ಯಾಡಿ, ಜಯರಾಮ ಬೆಳಂದೂರು, ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ನಾರಾಯಣ.ಕೆ ಪಂಚಾಯತ್ ಸಿಬ್ಬಂದಿಗಳಾದ ಮಮತ,ಹರ್ಷಿತ್, ಸಂತೋಷ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here