ನೈರುತ್ಯ ಪದವೀಧರ ಕ್ಷೇತ್ರ – ಮತದಾರರ ಹೆಸರು ನೋಂದಾಯಿಸಲು ನ.6 ಕೊನೆಯ ದಿನಾಂಕ

0

ಪುತ್ತೂರು: ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರದ ಮತಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರು ಸೇರಿಸಲಿಚ್ಚಿಸುವ ಪದವೀಧರರು ನಿಗದಿತ ಅರ್ಜಿ ನಮೂನೆ 18ರಲ್ಲಿ ನವೆಂಬರ್‌ 6ನೇ ತಾರೀಕಿಗೆ ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್‌ 6 ಕೊನೆಯ ದಿನವಾಗಿದೆ. ಇದುವರೆಗೂ ಪಟ್ಟಿಯಲ್ಲಿ ಹೆಸರು ಸೇರಿಸದೇ ಇರುವವರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರೂ ಆಗಿರುವ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here