ಸರಕಾರಿ ನೌಕರರ ವಾಲಿಬಾಲ್ ಕ್ರೀಡಾಕೂಟ: ಪುತ್ತೂರು ತಾಲೂಕಿನ ಇಬ್ಬರು ಶಿಕ್ಷಕರು ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಅ.27ರಿಂದ 29ರವರೆಗೆ ಮೂರು ದಿನಗಳ ಕಾಲ ತುಮಕೂರು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯ ಸರಕಾರಿ ನೌಕರರ, ರಾಜ್ಯ ಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಪುತ್ತೂರು ತಾಲೂಕಿನ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ.
ಶ್ರೀ ಮಹಾಲಿಂಗೇಶ್ವರ ದೇವಾಲಯ ಬಳಿಯ ಕಂಬಳಕೋಡಿ ನಿವಾಸಿ ಮತ್ತು ಸವಣೂರು ಅರೆಲ್ತಡಿ ಶಾಲಾ ಶಿಕ್ಷಕ ಶ್ರೀಕಾಂತ್ ಕಂಬಳಕೋಡಿ ಹಾಗೂ ಸೂತ್ರಬೆಟ್ಟು ನಿವಾಸಿ ಹಾಗೂ ಕಾಣಿಯೂರು ಪ್ರೌಢಶಾಲಾ ಶಿಕ್ಷಕ ಜಾರ್ಜ್ ಇವರುಗಳು ರಾಜ್ಯ ಮಟ್ಟದ ವಾಲಿಬಾಲ್ ನಲ್ಲಿ ದ.ಕ.ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

ಜಿಲ್ಲಾಮಟ್ಟದ ಕ್ರೀಡಾಕೂಟವೂ ಮಂಗಳಾ ಕ್ರೀಡಾಂಗಣದಲ್ಲಿ ಜರುಗಿದ್ದು ಇವರು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here