ಕಾವು: ಬಾವಿಗೆ ಹಾರಿ ವಿವಾಹಿತ ಮಹಿಳೆ ಆಯಿಷಾ ಆತ್ಮಹತ್ಯೆ-ಪತಿ ವಿರುದ್ಧ ದೂರು ದಾಖಲು

0

ಪುತ್ತೂರು: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಡ್ನೂರು ಗ್ರಾಮದ ಕಾವು ಮುಖಾರಿಮೂಲೆ ಎಂಬಲ್ಲಿಂದ ವರದಿಯಾಗಿದೆ. ಮುಖಾರಿಮೂಲೆ ಜೈನುದ್ದೀನ್ ಎಂಬವರ ಪುತ್ರಿ ಆಯಿಷಾ (31ವ)ರವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.

ಆಯಿಷಾರವರನ್ನು ವಳಾಲಿನ ಅಹಮ್ಮದ್ ಎಂಬವರ ಪುತ್ರ ಸಲೀಂ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ಸಲೀಂರವರು ಬೆಂಗಳೂರಿನಲ್ಲಿ ಸೂಪರ್ ಮಾರ್ಕೆಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದು ಆಯಿಷಾರವರು ಒಂದು ತಿಂಗಳ ಹಿಂದೆ ತನ್ನ ತಂದೆಯ ಮನೆಗೆ ಬಂದಿದ್ದರು ಎನ್ನಲಾಗಿದೆ. ಈ ಸಾವಿಗೆ ಆಯಿಷಾಳ ಗಂಡ ಮಾನಸಿಕ, ದೈಹಿಕ ಕಿರುಕುಳ ಹಿಂಸೆ ನೀಡಿದ್ದೇ ಕಾರಣವಾಗಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯಿಷಾಳ ತಂದೆ ಜೈನುದ್ದೀನ್‌ರವರು ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಉಪ ನಿರೀಕ್ಷಕ ಧನಂಜಯ್ ಬಿ.ಸಿ ಹಾಗೂ ಸಿಬ್ಬಂದಿಗಳು ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here