ಪುತ್ತೂರಿನಲ್ಲಿ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ-ಕ್ರೀಡಾ ಸಚಿವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ

0

ಪುತ್ತೂರು: ನವೆಂಬರ್ 16 ರಿಂದ 18 ರತನಕ ಪುತ್ತೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಬಗ್ಗೆ ಚರ್ಚೆ ನಡೆಸಲು ಪುತ್ತೂರು ಶಾಸಕರಾದ ಅಶೋಕ್ ರೈ ಅ. 27 ರಂದು ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ಬಿ ನಾಗೆಂದ್ರರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.


ರಾಜ್ಯಮಟ್ಟದ ಕ್ರೀಡಾಕೂಟ ನಡೆಯಲಿರುವ ಕಾರಣ ಕ್ರೀಡಾಕೂಟದಲ್ಲಿ ಕೈಗೊಳ್ಳಬೇಕಾದ ವ್ಯವಸ್ಥೆಗಳು ಮತ್ತು ಅನುದಾನ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಸಚಿವರ ಜೊತೆ ಶಾಸಕರು ಚರ್ಚೆ ನಡೆಸಿದರು.
ಕ್ರೀಡಾಕೂಟಕ್ಕೆ ಈಗಾಗಲೇ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಸಿದ್ದತಾ ಕಾರ್ಯ ಪ್ರಾರಂಭಗೊಂಡಿದ್ದು ಶಾಸಕರ ಸೂಚನೆಯಂತೆ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿಯವರು ಕ್ರೀಡಾ ಕೂಟದ ನೇತೃತ್ವವನ್ನು ವಹಸಿಕೊಂಡಿದ್ದು ಕಳೆದ ಎರಡು ವಾರಗಳಿಂದ ಕ್ರೀಡಾಂಗಣದ ಸುತ್ತ ವಿವಿಧ ಕಾಮಗಾರಿಗಳು ಭರದಿಂದ ಸಾಗುತ್ತಿದೆ. ಕ್ರೀಡಾಕೂಟಕ್ಕೆ ಅಗತ್ಯವಿರುವ ಎಲ್ಲಾ ನೆರವು ನೀಡುವುದಾಗಿ ಸಚಿವರು ಶಾಸಕರಿಗೆ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here