ಪುತ್ತೂರಿನಲ್ಲಿ ಎಸ್.ಡಿ.ಪಿ.ಐ ಸಮಾವೇಶ-ಕಾರ್ಯಕರ್ತರಿಗೆ ಮಾರ್ಗದರ್ಶನ, ವಿಚಾರ ವಿನಿಮಯ

0

ಪುತ್ತೂರು: ಎಸ್.ಡಿ.ಪಿ.ಐ ಪಕ್ಷದ ಸಮಾವೇಶ ಲಯನ್ಸ್ ಕ್ಲಬ್ ಹಾಲ್‌ನಲ್ಲಿ ಅ.27ರಂದು ಸಂಜೆ ನಡೆಯಿತು.ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ ಅಧ್ಯಕ್ಷೆತೆ ವಹಿಸಿದ್ದರು.ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯರಾದ ಅಕ್ಬರ್ ಅಲಿ ಪೊನ್ನೋಡಿಯವರು ಪಕ್ಷದ ಮುಂದಿನ ಬೆಳವಣಿಗೆಯ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿ ವಿಚಾರ ವಿನಿಮಯ ಮಾಡಿದರು.ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ಕಾರ್ಯದರ್ಶಿ ಶಾಕಿರ್ ಅಳಕೆಮಜಲು ಪ್ರಾಸ್ತಾವಿಕ ಮಾತುಗಳನ್ನಾಡಿದರು.ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್‌ರವರು ಕ್ಯಾಡರ್‌ಗಳಿಗೆ ಮಾರ್ಗದರ್ಶನ ನೀಡಿದರು.


ವೇದಿಕೆಯಲ್ಲಿ ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷ ಹಮೀದ್ ಸಾಲ್ಮರ, ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪುರುಷರಕಟ್ಟೆ, ಜೊತೆ ಕಾರ್ಯದರ್ಶಿಗಳಾದ ಮುಸ್ತಫಾ ಮತ್ತು ಅದ್ದು ಕೊಡಿಪ್ಪಾಡಿ, ಸಂಘಟನಾ ಕಾರ್ಯದರ್ಶಿ ಉಸ್ಮಾನ್ ಎ.ಕೆ, ಎಸ್.ಡಿ.ಪಿ.ಐ ನಗರ ಅಧ್ಯಕ್ಷ ಸಿರಾಜ್ ಕೂರ್ನಡ್ಕ, ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಸದಸ್ಯರಾದ ಅಡ್ವೊಕೇಟ್ ಅಬ್ದುಲ್ ರಹಿಮಾನ್, ಹಿರಿಯಾರಾದ ಪಿಬಿಕೆ ಮೊಹಮ್ಮದ್, ಅಶ್ರಫ್ ಬಾವು, ವಿಮೆನ್ ಇಂಡಿಯಾ ಮೂವ್ಮೆಂಟ್ ಅಧ್ಯಕ್ಷೆ ಝಾಹಿದ ಸಾಗರ್, ನಗರಸಭಾ ಸದಸ್ಯೆ ಝೋಹರಾ ಬನ್ನೂರು, ಉಪಸ್ಥಿತರಿದ್ದರು.


ಎಸ್‌ಡಿಟಿಯು ಕಾರ್ಯದರ್ಶಿ ಇಫಾಝ್ ಬನ್ನೂರು ಮತ್ತು ಕಬಕ, ನರಿಮೊಗರು, ಪುಣಚ, ವಿಟಾ, ಕುಂಬ್ರ ಬ್ಲಾಕ್‌ನ ಅಧ್ಯಕ್ಷರುಗಳು, ಕಾರ್ಯದರ್ಶಿಗಳು ಹಾಗೂ ಎಸ್.ಡಿ.ಪಿ.ಐ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.ಕಾರ್ಯದರ್ಶಿಯಾದ ಅಬ್ದುಲ್ ರಹಿಮಾನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಮುಸ್ತಫಾ ವಂದಿಸಿದರು.

LEAVE A REPLY

Please enter your comment!
Please enter your name here