![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ತಾಂತ್ರಿಕ ಸಲಹೆಗಾರ ಜಯೇಂದ್ರ ಬಿ. ದೀಪ ಬೆಳಗಿಸಿದರು. ಸಹಶಿಕ್ಷಕ ಹರೀಶ್ ಆಚಾರ್ಯ ಬಿ., ವಾಲ್ಮೀಕಿಯವರ ಜೀವನ ಚರಿತ್ರೆಯನ್ನು ಕಥೆಯ ಮೂಲಕ ವಿವರಿಸಿದರು. ವೇದಿಕೆಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ರಮೇಶ್ ರೈ ಆರ್.ಬಿ. ಉಪಸ್ಥಿತರಿದ್ದರು. ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಗಾಯತ್ರಿ ಯು.ಎನ್. ಸ್ವಾಗತಿಸಿ, ವಂದಿಸಿದರು. ಸಂಸ್ಥೆಯ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.