ಅ.31: ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಾರ್ಷಿಕೋತ್ಸವ

0

ಪುತ್ತೂರು: ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಾರ್ಷಿಕೋತ್ಸವ ಅ.31ರಂದು ನಡೆಯಲಿದ್ದು, ಸಂಜೆ 4-೦೦ ಗಂಟೆಗೆ ಮಕ್ಕಳ ನೃತ್ಯೋತ್ಸವ ಆರಂಭವಾಗಲಿದೆ. ಸಂಜೆ 6 ಗಂಟೆಗೆ ಸಭಾ ಕಾರ‍್ಯಕ್ರಮವು ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್, ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ನಿಕಟಪೂರ್ವ ಅಧ್ಯಕ್ಷ ಸುಹಾಸ್ ಎ.ಪಿ.ಎಸ್, ಬಂಟರ ಯಾನೆ ನಾಡವರ ಮಾತೃ ಸಂಘ, ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ದಂಬೆಕ್ಕಾನ ಸದಾಶಿವ ರೈ, ಪುತ್ತೂರು ಮೂಕಾಂಬಿಕ ಗ್ಯಾಸ್ ಏಜೆನ್ಸೀಸ್ ಮಾಲಕ ಸಂಜೀವ ಆಳ್ವ, ಡಾ. ಬಿ. ನಳಿನಿ ರೈಯವರ ಸುಪುತ್ರಿ ಪ್ರತಿಮಾ ಹೆಗ್ಡೆಯವರು ಭಾಗವಹಿಸಲಿದ್ದಾರೆ ಸಭಾ ಕಾರ‍್ಯಕ್ರಮದ ಬಳಿಕ ಮಕ್ಕಳ ನೃತ್ಯೋತ್ಸವ ಮುಂದುವರಿಯಲಿದೆ ಎಂದು ಸಂಸ್ಥೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ಎ. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣ ನಾಯ್ಕ, ಹಿರಿಯ ವಿದ್ಯಾರ್ಥಿ ಶಂಘದ ಸಂಚಾಲಕ ಸರ್ವೇಶ್ ರಾಜೇ ಅರಸ್ ಹಾಗೂ ವಿದ್ಯಾರ್ಥಿ ನಾಯಕ ಗೌತಮ್ ವಿ. ಅಂಚನ್‌ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here