ರಾಮಕುಂಜ: ನಿವೃತ್ತ ಅಟೆಂಡರ್ ಕೃಷ್ಣಪ್ಪ ನಾಯ್ಕ್ ನಿಧನ

0

ರಾಮಕುಂಜ: ರಾಮಕುಂಜ ಗ್ರಾಮದ ಸಂಪ್ಯಾಡಿ ನಿವಾಸಿ, ನಿವೃತ್ತ ಅಟೆಂಡರ್ ಕೃಷ್ಣಪ್ಪ ನಾಯ್ಕ್(67ವ.)ರವರು ಅ.29ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಕೃಷ್ಣಪ್ಪ ನಾಯ್ಕ್ ಅವರು ಮಂಗಳೂರಿನ ಫಾದರ್ ಮುಲ್ಲಾರ‍್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಅವರು ಅ.29ರಂದು ತಡರಾತ್ರಿ ನಿಧನರಾದರು. ಕೃಷ್ಣಪ್ಪ ನಾಯ್ಕ್ ಅವರು ರಾಮಕುಂಜ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯಲ್ಲಿ ಸುಮಾರು 32 ವರ್ಷ ಅಟೆಂಡರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ ರಾಮಕುಂಜ ಗ್ರಾ.ಪಂ.ಸದಸ್ಯೆ ಭವಾನಿ, ಪುತ್ರ ನವೀನ ಹಾಗೂ ಪುತ್ರಿ ಮಮತಾ ಅವರನ್ನು ಅಗಲಿದ್ದಾರೆ. ಮೃತರ ಮನೆಗೆ ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಸುಚೇತಾ ಬರೆಂಬೆಟ್ಟು, ಉಪಾಧ್ಯಕ್ಷ ಕೇಶವ ಗಾಂಧಿಪೇಟೆ, ಪಿಡಿಒ ಲಲಿತಾ, ಗ್ರಾ.ಪಂ.ಸದಸ್ಯರು ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here