![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು:ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಡಿಕ್ಕಿಯಾಗಿ ಗಾಯಗೊಂಡ ಘಟನೆ ಕೌಡಿಚ್ಚಾರ್ನಲ್ಲಿ ನಡೆದಿದೆ.
ಪಡುವನ್ನೂರು ಗ್ರಾಮದ ನಾರಾಯಣ ರೈ(67ವ)ರವರು ಗಾಯಾಳು.ಅವರು ಕೌಡಿಚ್ಚಾರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಹೈಲ್ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್ ಡಿಕ್ಕಿಯಾಗಿದೆ.ತೀವ್ರ ಗಾಯಗೊಂಡಿರುವ ನಾರಾಯಣ ರೈ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಸವಾರ ಸುಹೈಲ್ ಅವರಿಗೂ ಗಾಯವಾಗಿದ್ದು ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.