ಪುಳಿತ್ತಡಿಯಲ್ಲಿ ಲಾರಿ ಡಿಕ್ಕಿಯಾಗಿ ಬೈಕ್ ಸವಾರ‌ ಮೃತಪಟ್ಟ ಪ್ರಕರಣ-ಆರೋಪಿ ದೋಷಮುಕ್ತ

0

ಪುತ್ತೂರು: ಉಪ್ಪಿನಂಗಡಿ- ಸುಬ್ರಹ್ಮಣ್ಯ ಹೆದ್ದಾರಿಯ ಪುಳಿತ್ತಡಿ ಎಂಬಲ್ಲಿ 3 ವರ್ಷದ ಹಿಂದೆ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಪ್ರಕರಣದಲ್ಲಿ ಆರೋಪಿ ಲಾರಿ ಚಾಲಕ ಕಾರ್ಕಳ ಈದು ಗ್ರಾಮದ ಹೊಸಮಾರು ಸಯ್ಯದ್ ಸಾಲ್ದತ್ ಅಜಿಲನ್ ಎಂಬವರನ್ನು ದೋಷಮುಕ್ತಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ.


2020ನೇ ನ.3ರಂದು ಸುಬ್ರಹ್ಮಣ್ಯ ಮಾರ್ಗದಿಂದ ಉಪ್ಪಿನಂಗಡಿ ಕಡೆಗೆ ಚಲಾಯಿಸುತ್ತಿದ್ದ ಲಾರಿ ಪುಳಿತ್ತಡಿ ಎಂಬಲ್ಲಿ ಬೈಕ್‌ಗೆ ಡಿಕ್ಕಿಯಾಗಿತ್ತು.ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ನಾರಾಯಣ ಎಂಬವರು ಗಂಭೀರ ಗಾಯಗೊಂಡು ಮೃತಪಟ್ಟಿದ್ದರು.ಘಟನೆ ಕುರಿತು ಪುತ್ತೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಲಾರಿ ಚಾಲಕ ಸಯ್ಯದ್ ಸಾಲ್ದತ್ ಅಜಿಲನ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ನ್ಯಾಯಾಲಯ ಆರೋಪಿಯನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.ಆರೋಪಿ ಪರ ವಕೀಲರಾದ ದೇವಾನಂದ ಕೆ, ವಿಶ್ವನಾಥ ನಂದಿಲ, ಹರಿಣಿ ವಾದಿಸಿದ್ದರು.

LEAVE A REPLY

Please enter your comment!
Please enter your name here