ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಜ್ರುಪಾದೆ ಶಾಖಾ ಗುಮಾಸ್ತ ವೆಂಕಟಕೃಷ್ಣರವರಿಗೆ ಬೀಳ್ಕೊಡುಗೆ

0

ಪುತ್ತೂರು:ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಜ್ರುಪಾದೆ ಶಾಖೆಯಲ್ಲಿ 28 ವರ್ಷಗಳ ಕಾಲ ಮಾರಾಟ ಗುಮಾಸ್ತರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ವೆಂಕಟಕೃಷ್ಣ ಪಾಲೆಚ್ಚಾರುರವರಿಗೆ ಬೀಳ್ಕೊಡುಗೆ ಸಮಾರಂಭವು ಅ.31ರಂದು ಸಂಘ ಕೇಂದ್ರ ಕಚೇರಿಯಲ್ಲಿ ನಡೆಯಿತು.


ನಿವೃತ್ತರನ್ನು ಸನ್ಮಾನಿಸಿ, ಗೌರವಿಸಿದ ಸಂಘದ ಅಧ್ಯಕ್ಷ ಸತೀಶ್ ಗೌಡ ಮಾತನಾಡಿ, ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸಿ ಸಂಘದ ಅಭಿವೃದ್ಧಿಯಲ್ಲಿ ಅವರ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸನ್ಮಾನ ಸ್ವೀಕರಿಸಿ ವೆಂಕಟಕೃಷ್ಣ ಮಾತನಾಡಿ, ತನ್ನ ಅವಧಿಯಲ್ಲಿ ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.
ಉಪಾಧ್ಯಕ್ಷ ಅಬ್ದುಲ್ ಹಕೀಂ, ನಿರ್ದೇಶಕರಾದ ಪ್ರವೀಣಚಂದ್ರ ಆಳ್ವ ಎ.ಯಂ, ಪ್ರಕಾಶ್ಚಚಂದ್ರ ಆಳ್ವ, ಚಂದಪ್ಪ ಪೂಜಾರಿ ಕಾಡ್ಲ, ವಿನಯ, ಸುರೇಶ್ ಯನ್, ಸೀತಾರಾಮ ಗೌಡ, ನವೀನ ಕರ್ಕೇರಾ, ಪ್ರಮೋದ್ ಬಿ. ನಿವೃತ್ತರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿ, ಶುಭಹಾರೈಸಿದರು.ಮುಖ್ಯಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಗೌಡ ಸ್ವಾಗತಿಸಿ, ವಂದಿಸಿದರು. ಸಿಬಂದಿಗಳಾದ ಕೆ.ಶುಭ, ಕೀರ್ತನ್ ಶೆಟ್ಟಿ, ಪುಷ್ಪಾ ಎಂ., ಹರ್ಷಿತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here