ಮೇನಾಲ, ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವ

0

ಪುತ್ತೂರು: ಮೇನಾಲ, ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ನಾಡಗೀತೆ ಹಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಸಂಸ್ಥೆಯ ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್ ಕನ್ನಡ ರಾಜ್ಯೋತ್ಸವದ ಕುರಿತು ಹಿತನುಡಿಗಳನ್ನಾಡಿದರು.ಸಂಸ್ಥೆಯ ಮುಖ್ಯಶಿಕ್ಷಕಿ ತಪಸ್ಸಿನಿ ಪ್ರಸ್ತಾವಿಕ ಮಾತುಗಳನ್ನಾಡಿ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ವಿವರಿಸಿದರು.
ಸಂಸ್ಥೆಯ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಭಾಷಣ, ಗಾಯನ, ನೃತ್ಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಶಿಕ್ಷಕ ವೃಂದದವರು ಗಾಯನವನ್ನು ಹಾಡಿದರು.ಕಾರ್ಯಕ್ರಮದಲ್ಲಿ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.ಶಿಕ್ಷಕಿಯರಾದ ಅಕ್ಷತ ಸ್ವಾಗತಿಸಿ, ಪ್ರತೀಕ್ಷಾ ವಂದಿಸಿದರು.ಶಿಕ್ಷಕಿ ಮನೋದ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here