ಕೊಪ್ಪ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

0

ಕಾಣಿಯೂರು: ಕೊಪ್ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳ ಕಲರವದಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಭಾಷಣ,ನೃತ್ಯ ಹಾಗೂ ಕನ್ನಡಾಂಬೆಯ ವೇಷ ಭೂಷಣ ಧರಿಸಿ ಸಂಭ್ರಮಿಸಿದರು.ಈ ಕಾರ್ಯಕ್ರಮದಲ್ಲಿ ಅತಿಥಿ ಶಿಕ್ಷಕರಾದ ಸುರೇಶ್ ರವರು ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು.ಮುಖ್ಯ ಶಿಕ್ಷಕರಾದ ನಾರಾಯಣ್ ಡಿ ಪುಣಚ ಇವರು ಕನ್ನಡ ನಾಡು ನುಡಿಯ ಬಗ್ಗೆ ತಿಳಿಸಿದರು.ಪೋಷಕರಾದ ರಮಣಿ ಮತ್ತು ಕಮಲ ಹಾಗೂ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here