ಮರೀಲ್ ಇ.ಎಸ್.ಆರ್ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವ

0

ಪುತ್ತೂರು: ಇಎಸ್‌ಆರ್ ಸ್ಕೂಲ್ ಮರೀಲ್ ಇಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.ಶಾಲಾ ವಿದ್ಯಾರ್ಥಿಗಳು ನಾಡಗೀತೆ, ರಾಷ್ಟ್ರಗೀತೆ ಮತ್ತು ಹಲವು ಕನ್ನಡ ಹಾಡುಗಳನ್ನು ಹಾಡಿದರು. ನಂತರ ಶಿಕ್ಷಕ ರಕ್ಷಕ ಸಂಘದ ಸದಸ್ಯ ಅಬ್ದುಲ್ ಹಮೀದ್ ಸಾಲ್ಮರ ಮಾತನಾಡಿ ಮೈಸೂರು ಪ್ರಾಂತ್ಯ ಕರ್ನಾಟಕ ಎಂಬ ನಾಮದೊಂದಿಗೆ ಏಕೀಕರಣವಾಯಿತು ಎಂದು ಸಂಕ್ಷಿಪ್ತವಾಗಿ ವಿವರಿಸಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸಿರಾಜ್ ಅಧ್ಯಕ್ಷತೆ ವಹಿಸಿದ್ದರು.


ಆಡಳಿತ ಮಂಡಳಿಯ ಸದಸ್ಯ ವಿ.ಕೆ ಶರೀಫ್‌ರವರು ಕನ್ನಡ ರಾಜ್ಯೋತ್ಸವದ ಬಗ್ಗೆ ಮಾತನಾಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ತಾಜುನ್ನಿಸಾ ಹಾಗೂ ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸಿರಾಜ್‌ರವರು ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚಿದರು.

LEAVE A REPLY

Please enter your comment!
Please enter your name here