ಬಡಗನ್ನೂರು: ನ.4 ರಂದು ಗ್ರಾಮ ಅರಣ್ಯ ಸಮಿತಿ 2022-23ನೇ ಸಾಲಿನ ವಾರ್ಷಿಕ ಮಹಾಸಭೆ

0

ಬಡಗನ್ನೂರುಃ  ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವಿಭಾಗ, ಪುತ್ತೂರು ಉಪ ವಿಭಾಗ, ಪುತ್ತೂರು ವಲಯ, ಗ್ರಾಮ ಅರಣ್ಯ ಸಮಿತಿ ಬಡಗನ್ನೂರು ಇದರ 2021-22ನೇ ಸಾಲವ ವಾರ್ಷಿಕ ಮಹಾಸಭೆ ಮತ್ತು ಹೊಸ ನಿರ್ವಹಣಾ ಸಮಿತಿ ಆಯ್ಕೆ ಪ್ರಕ್ರಿಯೆ ನ.4 ರಂದು ಅಪರಾಹ್ನ ಗಂ 3 ಕ್ಕೆ  ಪಟ್ಟೆ ಬಡಗನ್ನೂರು ಕೃಷ್ಣ ಹಿರಿಯ ಪ್ರಾಥಮಿಕ ಶಾಲೆ ನಡೆಯಲಿರುವುದು.ಕಾರ್ಯಕ್ರಮದ ಉದ್ಘಾಟನೆಯನ್ನು  ಬಡಗನ್ನೂರು ಗ್ರಾ.ಪಂ ಅಧ್ಯಕ್ಷೆ  ಪುಷ್ಪಲತ ಎಂ. ಉದ್ಘಾಟನೆ ಮಾಡಲಿದ್ದಾರೆ.ಸಭೆಯು ಬಡಗನ್ನೂರು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷೆ ರೇಖಾ ನಾಗರಾಜ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. 

ಮುಖ್ಯ ಅತಿಥಿಗಳಾಗಿ  ಪುತ್ತೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ, ಪುತ್ತೂರು ವಲಯ ,ಪುತ್ತೂರು ವಲಯ ಅರಣ್ಯ ಅಧಿಕಾರಿ ಕಿರಣ್ ಬಿ. ಎಂ., ಪಟ್ಟೆ  ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ  ರಾಜಗೋಪಾಲ ಎನ್‌, ಪುತ್ತೂರು ತಾಲೂಕು ಕಂದಾಯ ನಿರೀಕ್ಷಕ ಹಾಗೂ ಚುನಾವಣಾಧಿಕಾರಿ ಗೋಪಾಲ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಗ್ರಾಮಾರಣ್ಯ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿ  ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಗ್ರಾಮಾರಣ್ಯ ಸಮಿತಿ ಅಧ್ಯಕ್ಷ  ರೇಖಾ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

LEAVE A REPLY

Please enter your comment!
Please enter your name here