ಬಜತ್ತೂರು: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಹಲ್ಲೆ-ದೂರು

0

ಉಪ್ಪಿನಂಗಡಿ: ಪಡೆದುಕೊಂಡ ಹಣವನ್ನು ಹಿಂದಿರುಗಿಸಲು ವಿಳಂಬಿಸಿದ್ದಾರೆಂದು ರಸ್ತೆಯಲ್ಲಿ ಪತಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಬಜತ್ತೂರು ಗ್ರಾಮದ ಮಹಿಳೆ ಮತ್ತಾಕೆಯ ಪತಿಯ ಮೇಲೆ ಗುಂಪೊಂದು ಹಲ್ಲೆ ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.


ಬಜತ್ತೂರು ಗ್ರಾಮದ ಮಣಿಕ್ಕಳ ಮನೆ ನಿವಾಸಿ ಉಷಾ (30) ಮತ್ತಾಕೆಯ ಗಂಡ ಕೃಷ್ಣಪ್ಪ ಎಂಬವರು ಸಾರ್ವಜನಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸುರೇಶ , ಉಮೇಶ, ಗಿರೀಶ, ಮತ್ತೂ ಇನ್ನೋರ್ವ ಗುಂಪುಗೂಡಿ ಬಂದು ಉಷಾ ರವರ ಮೈ ಮೇಲೆ ಕೈ ಮಾಡಿ ಮಾನಭಂಗಕ್ಕೆ ಯತ್ನಿಸಿದ್ದಲ್ಲದೆ, ಅವರ ಮೇಲೆ ದೊಣ್ಣೆಯಿಂದ ಹೊಡೆದು ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ. ರಕ್ಷಿಸಲು ಬಂದ ಗಂಡ ಕೃಷ್ಣಪ್ಪರ ಮೇಲೂ ಕೋಲಿನಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಗಾಯಗೊಂಡ ದಂಪತಿಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here