ನೆ.ಮುಡ್ನೂರು: ಕರ್ನೂರಿನಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

0

ಪುತ್ತೂರು: ನೆ.ಮುಡ್ನೂರು ಗ್ರಾಮದ ಕರ್ನೂರು ಸಮೀಪ ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿ ಸಂಭವಿಸಿದ ಘಟನೆ ನ.2ರಂದು ನಡೆದಿದೆ.
ಕರ್ನೂರು ಆಲಾಬಿಮೂಲೆ ಎಂಬಲ್ಲಿ ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಸಿಡಿಲು ಬಡಿದಿದ್ದು ಸಿಡಿಲಿನ ಆರ್ಭಟಕ್ಕೆ ಮನೆಯ ಹಿಂಬದಿಯ ಗೋಡೆ ಬಿರುಕು ಬಿಟ್ಟಿದ್ದು ಶೀಟ್‌ಗೆ ಹಾನಿಯಾಗಿದೆ. ಅಲ್ಲದೇ ಮನೆಯ ವಿದ್ಯುತ್ ವಯರಿಂಗ್ ಸಂಪೂರ್ಣ ಸುಟ್ಟು ಹೋಗಿದ್ದು ಮನೆಯ ಮುಂಭಾಗದ ಎರಡು ತೆಂಗಿನ ಮರ ಕೂಡಾ ಹೊತ್ತಿ ಉರಿದಿದೆ. ಮನೆಯೊಳಗಿದ್ದ ಅಬ್ದುಲ್ ರಹಿಮಾನ್ ಅವರ ಮಗನಿಗೂ ಅಲ್ಪ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಕಂದಾಯ ಇಲಾಖೆಯ ರಘುರಾಮ, ನೆ.ಮುಡ್ನೂರು ಗ್ರಾ.ಪಂ ಸದಸ್ಯ ಶ್ರೀರಾಮ ಪಕ್ಕಳ ಕರ್ನೂರುಗುತ್ತು, ಗ್ರಾ.ಪಂ ಮಾಜಿ ಸದಸ್ಯ ಖಾದರ್ ಕರ್ನೂರು, ಸ್ಥಳೀಯರಾದ ಮೋಹನ್ ಹಾಗೂ ಮೆಸ್ಕಾಂ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here