ನ.4-18: ಕೆಯ್ಯೂರು ಗ್ರಾಮ ಪಂಚಾಯತ್, ಕಂಪಾನಿಯಾ ನೆಮ್ಮದಿ ವೆಲ್‌ನೆಸ್ ಸೆಂಟರ್‌ನಿಂದ 15 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

0

ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್ ಹಾಗೂ ಕಂಪಾನಿಯಾ ನೆಮ್ಮದಿ ವೆಲ್‌ನೆಸ್ ಸೆಂಟರ್‌ನಿಂದ 15 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವು ಕೆಯ್ಯೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನ.4ರಿಂದ 18ರ ವರೆಗೆ ಪೂರ್ವಾಹ್ನದಿಂದ ಸಂಜೆಯವರೆಗೆ ನಡೆಯಲಿದೆ.
ಶಿಬಿರವನ್ನು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಶಶಿಧರ್ ರಾವ್ ಬೊಳಿಕ್ಕಲರವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೆಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶರತ್ ಕುಮಾರ್ ಮಾಡಾವುರವರು ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಮಂಗಳೂರು ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಬಿ ಜಯರಾಮ್ ರೈ ಬಳಜ್ಜ, ಕೆಯ್ಯೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮೋಹನ್ ರೈ ಬೇರಿಕೆ, ಕೆಯ್ಯೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ನಮಿತ ಎ.ಕೆ, ಇಳಂತಾಜೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಜಿ ಅಧ್ಯಕ್ಷ ಚಂದ್ರಶೇಖರ್ ರೈ ಇಳಂತಾಜೆ, ಮಂಗಳೂರು ಕ್ರಿಬ್ಕೊ ಪ್ರಕಾಶ್ ಆಳ್ವ ಇಳಂತಾಜೆ, ಕೆಯ್ಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಮಿತ್ರ ಪಲ್ಲತ್ತಡ್ಕರವರು ಭಾಗವಹಿಸಲಿದ್ದಾರೆ.

ಫೂಟ್ ಪಲ್ಸ್ ಥೆರಪಿ ಆರೋಗ್ಯದೆಡೆಗೆ ಒಂದು ಹೆಜ್ಜೆ:
ಮೊದಲ ಬಾರಿಗೆ ಭಾರತದಲ್ಲಿ ಪರಿಚಯಿಸಲಾಗಿದ್ದು ವೈದ್ಯಕೀಯವಾಗಿ ಪ್ರಾಮಾಣಿಕವಾಗಿದೆ. ರಕ್ತ ಪರಿಚಲನೆ ಮತ್ತು ನರಗಳ ಯಾವುದೇ ವಿವಿಧ ಸರಳ ಮತ್ತು ದೀರ್ಘಕಾಲಿನ ಸಮಸ್ಯೆಗಳನ್ನು ಔಷಧಿರಹಿತವಾಗಿ, ಅಡ್ಡ ಪರಿಣಾಮವಿಲ್ಲದೆ ನಿವಾರಿಸಬಹುದಾಗಿದೆ. 30 ನಿಮಿಷ TENS ಮತ್ತು EMS ಥೆರಪಿಯಿಂದ ನಮ್ಮ ದೇಹದಲ್ಲಿ 5ಕಿ.ಮೀ ವಾಕಿಂಗ್ ಮಾಡಿದಷ್ಟು ರಕ್ತ ಸಂಚಾರ ಸಹಕಾರಿಯಾಗುತ್ತದೆ.
ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ದೇಶದಾದ್ಯಂತ 350 ಶಾಖೆಗಳನ್ನು ಹೊಂದಿದ್ದು, 10 ಲಕ್ಷಕ್ಕಿಂತ ಹೆಚ್ಚಿನ ಜನರು ಪರಿಹಾರ ಕಂಡುಕೊಂಡಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಕೋರಲಾಗಿದೆ. ಬನ್ನಿ ಥೆರಪಿ ಶಿಬಿರಕ್ಕೆ ನಾವು ನೀವು ಸೇರಿ ಆರೋಗ್ಯವಂತರಾಗೋಣ. ಹೆಚ್ಚಿನ ಮಾಹಿತಿಗೆ 9164298414, 7760764165 ನಂಬರನ್ನು ಸಂಪರ್ಕಿಸಬಹುದು ಎಂದು ನೆಮ್ಮದಿ ವೆಲ್‌ನೆಸ್ ಸೆಂಟರಿನ ಕೆ.ಪ್ರಭಾಕರ ಸಾಲ್ಯಾನ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಮಸ್ಯೆಗಳಿಂದ ಪರಿಹಾರ ಪಡೆಯಿರಿ..
*ಮಧುಮೇಹ *ಅಧಿಕ ರಕ್ತದೊತ್ತಡ *ಸಂಧಿವಾತ
*ವೆರಿಕೋಸ್ ವೇನ್ *ಸ್ನಾಯು ಸೆಳೆತ *ಊತ
*ಪಾರ್ಕಿನ್‌ಸನ್ *ಸಯಾಟಿಕಾ *ಸರ್ವಿಕಲ್ ಸ್ಪಾಂಡಿಲೈಟಿಸ್
*ನಿದ್ರಾಹೀನತೆ *ಥೈರಾಯಿಡ್ *ಪಾರ್ಶ್ವವಾಯು
*ಬೆನ್ನುನೋವು *ಬೊಜ್ಜು ನಿವಾರಣೆ
*ಬಿ.ಪಿ/ಶುಗರ್, ಕುತ್ತಿಗೆ ನೋವು, ಸೊರಿಯಾಸಿಸ್
*ಸಕ್ಕರೆ ಕಾಯಿಲೆಯಿಂದ ಬರುವ ಪಾದದ ಉರಿ
*ಮಾಂಸಖಂಡಗಳ ಸೆಳೆತದಿಂದ ಮುಕ್ತಿ ಹಾಗೂ ಪರಿಚಲನೆ
ಮತ್ತು ಇನ್ನಿತರ ಎಲ್ಲಾ ಕಾಯಿಲೆಗಳಿಗೆ ಪರಿಹಾರ

LEAVE A REPLY

Please enter your comment!
Please enter your name here