ಉಪ್ಪಿನಂಗಡಿ- ನೆಕ್ಕಿಲಾಡಿಯಲ್ಲಿ ಸರಣಿ ಕಳ್ಳತನ

0

ಉಪ್ಪಿನಂಗಡಿ: 34 ನೆಕ್ಕಿಲಾಡಿ ಹಾಗೂ ಉಪ್ಪಿನಂಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಅಂಗಡಿ, ಪೆಟ್ರೋಲ್ ಪಂಪ್‌ಗಳಲ್ಲಿ ಸರಣಿ ಕಳ್ಳತನ ನಡೆದ ಘಟನೆ ನ.4ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.


ಗಾಂಧಿಪಾರ್ಕ್ ಬಳಿ ಜಗದೀಶ್ ನಾಯಕ್ ಎಂಬವರಿಗೆ ಸೇರಿದ ಟೈಲ್ಸ್ ಅಂಗಡಿಯ ಶಟರ್‌ನ ಬೀಗ ಮುರಿದು ಒಳನುಗ್ಗಿದ ಕಳ್ಳ ಕ್ಯಾಶ್ ಡ್ರಾವರ್‌ನಲ್ಲಿದ್ದ ಸುಮಾರು 20 ಸಾವಿರದಷ್ಟು ನಗದನ್ನು ಕದ್ದೊಯ್ದಿದ್ದಾನೆ. ಅಲ್ಲೇ ಪಕ್ಕದ ಗುಜಿರಿ ಅಂಗಡಿಗೂ ನುಗ್ಗಿದ ಕಳ್ಳ ಅಲ್ಲಿ ಇದ್ದ ತಾಮ್ರದ ಬೆಲೆ ಬಾಳುವ ಸೊತ್ತುಗಳನ್ನು ಕಳವು ಮಾಡಿದ್ದಾನೆ. ಅಲ್ಲೇ ಪಕ್ಕದ ಹೊಟೇಲೊಂದಕ್ಕೂ ನುಗ್ಗಿ ಅಲ್ಲಿಂದಲೂ ಹಣವನ್ನು ಕದ್ದೊಯ ನೆಕ್ಕಿಲಾಡಿಯ ಭಾರತ್ ಪೆಟ್ರೋಲ್ ಪಂಪ್‌ಗೆ ನುಗ್ಗಿದ ಕಳ್ಳ ಅಲ್ಲಿನ ಕ್ಯಾಶ್ ಡ್ರಾವರ್ ಓಪನ್ ಮಾಡಿ ಕಳವುಗೈದಿದ್ದಾನೆ. 34 ನೆಕ್ಕಿಲಾಡಿಯ ರವೀಂದ್ರ ಪ್ರಭು ಅವರಿಗೆ ಸೇರಿದ ಬೊಳ್ಳಾರ್ ಬಳಿಯಿರುವ ವೃಂದಾ ವೈಭವ್ ಗ್ಯಾಸ್ ಪಂಪ್‌ಗೆ ನುಗ್ಗಿದ ಕಳ್ಳ ಇಲ್ಲಿದ್ದ ಎರಡು ಗಾಜಿನ ಬಾಗಿಲನ್ನು ಒಡೆದು ಒಳನುಗ್ಗಿದ್ದು, ಕಳ್ಳ ಒಡೆದು ಹಾಕಿದ ಗಾಜಿನ ಬಾಗಿಲಿನ ಮೌಲ್ಯವೇ ಸುಮಾರು ಎರಡು ಲಕ್ಷದಷ್ಟಿರಬಹುದೆಂದು ಅಂದಾಜಿಸಲಾಗಿದೆ. ಇಲ್ಲಿಂದ ದೇವರ ಮಂಟಪದಲ್ಲಿದ್ದ ಬೆಳ್ಳಿಯ ಚೆಂಬು, ನಗದನ್ನು ಕದ್ದೊಯ್ದಿದ್ದಾನೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಅಂಗಡಿಗಳನ್ನಷ್ಟೇ ಈಗ ಟಾರ್ಗೆಟ್ ಮಾಡಿದ್ದು, ಹಲವು ಅಂಗಡಿಗಳಲ್ಲಿ ಕಳ್ಳತನ ನಡೆಸಿದ್ದಾನೆ. ಆದರೆ ಕದ್ದು ಹೋದ ಸೊತ್ತುಗಳ ನಿಖರ ಮೌಲ್ಯ ಇನ್ನಷ್ಟೇ ತಿಳಿದು ಬರಬೇಕಿದೆ.

LEAVE A REPLY

Please enter your comment!
Please enter your name here