ಕಡಬ: ಸಿರಿಬಾಗಿಲು ದೈವಸ್ಥಾನ ಪುನರ್ ನವೀಕರಣ-ಬಾಲಾಲಯ ಪ್ರತಿಷ್ಠೆ

0

ಕಡಬ: ಸಿರಿಬಾಗಿಲು ಗ್ರಾಮದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಶ್ರೀ ದುರ್ಗಾ ಸನ್ನಿಧಿಯಲ್ಲಿ ಉಳ್ಳಾಕುಲು,ಬಚ್ಚನಾಯಕ ಹಾಗೂ ಶಿರಾಡಿ ದೈವಗಳ ದೈವಸ್ಥಾನ ಪುನರ್ ನವೀಕರಣ ಕೆಲಸ ಕಾರ್ಯಗಳು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ನ.4ರಂದು ಬ್ರಹ್ಮಶ್ರೀ ಉಚ್ಚಿಲತ್ತಾಯ ಪಧ್ಮನಾಭ ತಂತ್ರಿಗಳ ನೇತೃತ್ವದಲ್ಲಿ ದೈವಗಳ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮಗಳು ಜರುಗಿದವು.


ಈ ಕಾರ್ಯಕ್ರಮದಲ್ಲಿ ಊರ ಪರವೂರ ಭಕ್ತಾಧಿಗಳು ಗ್ರಾಮಸ್ಥರು ದೈವಗಳ ಪೂಜಾರಿ ವೃಂದದವರು ಶ್ರೀ ಕ್ಷೇತ್ರದ ಆಡಳಿತ ಸಮಿತಿ ಹಾಗೂ ಜೀರ್ಣೊದ್ಧಾರ ಸಮಿತಿಯ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದರು. ಮಧ್ಯಾಹ್ನ ಮಹಾಪೂಜೆಯ ನಂತರ ತೀರ್ಥಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here