ದಿ. ಸೀತಾರಾಮ ಶೆಟ್ಟಿ ಕಂಬಳತಡ್ಡ ಸ್ಮರಣಾರ್ಥ ಉಚಿತ ದಂತ ತಪಾಸಣಾ ಚಿಕಿತ್ಸಾ ಶಿಬಿರ

0

ಪುತ್ತೂರು: ಯುವ ಬಂಟರ ಸಂಘ ಪುತ್ತೂರು ಇದರ ನೇತೃತ್ವದಲ್ಲಿ ಜನ್ಮ ಫೌಂಡೇಷನ್ ಟ್ರಸ್ಟ್ ಪುತ್ತೂರು, ಇಂಟರಾಕ್ಟ್ ಕ್ಲಬ್ ರಾಮಕೃಷ್ಣ ಯುವ, ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಸಹಯೋಗದಲ್ಲಿ ಯುವ ಬಂಟರ ಸಂಘದ ಪೂರ್ವಧ್ಯಕ್ಷರಾದ ದಿ. ಸೀತಾರಾಮ ಶೆಟ್ಟಿ ಕಂಬಳತಡ್ಡ ಇವರ ಸ್ಮರಣಾರ್ಥ ಉಚಿತ ದಂತ ತಪಾಸಣಾ ಚಿಕಿತ್ಸಾ ಶಿಬಿರ ನ.4ರಂದು ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢ ಶಾಲೆಯಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ನಡೆಯಿತು.


ಶಿಬಿರವನ್ನು ಉದ್ಘಾಟಿಸಿದ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಯುವ ಬಂಟರ ಸಂಘ ದಿ. ಸೀತಾರಾಮ ಶೆಟ್ಟಿ ಕಂಬಳತ್ತಡ್ಡ ಇವರ ಸ್ಮರಣಾರ್ಥ ಮಾಡುವ ಶಿಬಿರ ಅರ್ಥಪೂರ್ಣವಾದುದು ಇದಕ್ಕೆ ಸಹಕರಿಸಿದ ಕೆ.ವಿಜಿ. ಶಿಕ್ಷಣ ಸಂಸ್ಥೆಗೆ ಕೃತಜ್ಞತೆಗಳನ್ನು ಸಲ್ಲಿಸಿದರು.
ಮುಖ್ಯ ಅತಿಥಿ ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ ಸಮಾಜಕ್ಕೆ ಉಪಯೋಗವಾಗುವ ಇಂತಹ ಬೇರೆ ಬೇರೆ ಕಾರ್ಯಕ್ರಮಗಳು ಇನ್ನಷ್ಟು ನಡೆಯಲಿ ಸಾರ್ವಜನಿಕರೆಲ್ಲರೂ ಇದರ ಸದುಪಯೋಗವನ್ನು ಪಡೆಯಲಿ ಎಂದರು.


ವೇದಿಕೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ನಿರ್ದೇಶಕ ಕುಂಬ್ರ ದುರ್ಗಾಪ್ರಸಾದ್ ರೈ, ರತ್ನಶ್ರೀ ಗ್ರೂಪ್ಸ್‌ನ ಮಾಲಕ ಜಯಂತ ಶೆಟ್ಟಿ ಕಂಬಳತ್ತಡ್ಡ, ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಯುವ ಬಂಟರ ಸಂಘದ ಅಧ್ಯಕ್ಷ ಮುಂಡಾಳಗುತ್ತು ಶಶಿರಾಜ್ ರೈ, ಇಂಟರಾಕ್ಟ್ ಕ್ಲಬ್ ರಾಮಕೃಷ್ಣ ಯುವ ಇದರ ಸಂಚಾಲಕ ಜನ್ಮ ಫೌಂಡೇಷನ್ ಇದರ ಅಧ್ಯಕ್ಷ ರೊ. ಹರ್ಷಕುಮಾರ್ ರೈ ಮಾಡಾವು, ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಮುಖ್ಯ ಗುರು ಜಯಲಕ್ಷೀ , ತಾಲೂಕು ಬಂಟರ ಸಂಘದ ಕೊಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ, ವಿದ್ಯಾಮಾತ ಅಕಾಡಮಿಯ ಭಾಗ್ಯೇಶ್ ರೈ ಕೆಯ್ಯೂರು, ಕೆ.ವಿ.ಜಿ. ವೈದ್ಯರಾದ ರಂಜಿತ್ ಶೆಟ್ಟಿ ,ಯುವ ಬಂಟರ ಸಂಘ ಪುತ್ತೂರು ಇದರ ಪ್ರಧಾನ ಕಾರ್ಯದರ್ಶಿ ರಂಜನಿ ಶೆಟ್ಟಿ, ಕೊಶಾಧಿಕಾರಿ ಕೆ.ಸಿ ಅಶೋಕ್ ಶೆಟ್ಟಿ, ಇಂಟರಾಕ್ಟ್ ಕ್ಲಬ್ ರಾಮಕೃಷ್ಣ ಯುವ ಇದರ ಅಧ್ಯಕ್ಷ ಪ್ರಕೃತಿ, ವಿದ್ಯಾರ್ಥಿ ಬಂಟರ ಸಂಘದ ಅಧ್ಯಕ್ಷ ಪ್ರಜನ್ ಶೆಟ್ಟಿ ಸೇರಿದಂತೆ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಯುವ ಬಂಟರ ಸಂಘದ ಅಧ್ಯಕ್ಷ ಮುಂಡಾಳಗುತ್ತು ಶಶಿರಾಜ್ ರೈ ಸ್ವಾಗತಿಸಿ, ಇಂಟರಾಕ್ಟ್ ಕ್ಲಬ್ ರಾಮಕೃಷ್ಣ ಯುವ ಇದರ ಸಂಚಾಲಕ, ಜನ್ಮ ಫೌಂಡೇಷನ್ ಇದರ ಅಧ್ಯಕ್ಷ ರೊ. ಹರ್ಷಕುಮಾರ್ ರೈ ಮಾಡಾವು ಧನ್ಯವಾದ ಸಲ್ಲಿಸಿದರು, ಶಿಕ್ಷಕಿ ಗೀತಾ ಮತ್ತು ಮನ್ಮಥ ಶೆಟ್ಟಿ ಕಾರ್‍ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here