ಚಾರ್ವಕದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ

0

ಕಾಣಿಯೂರು: ಕಡಬ ತಾಲೂಕಿನ ಚಾರ್ವಕ ಗ್ರಾಮದ ಬೊಮ್ಮಳಿಕೆ ಪದ್ಮನಾಭ ಗೌಡರ ಪುತ್ರ ತಾರನಾಥ(39) ನ.3ರಂದು ಬೆಂಗಳೂರಿನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ಸ್‌ ಸಿಟಿ ಎಂಬಲ್ಲಿ ಶೋರೂವೊಂದರಲ್ಲಿ ಉದ್ಯೋಗದಲ್ಲಿದ್ದ ಅವರು ಅಲ್ಲೇ ಸಮೀಪದಲ್ಲಿರುವ ತನ್ನ ರೂಂನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ಉದ್ಯೋಗದಲ್ಲಿ ಅವರು ಪತ್ನಿ, ಪುತ್ರನೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದರು. ವಾರದ ಹಿಂದೆ ತನ್ನ ಮನೆ ಬೊಮ್ಮಳಿಕೆಗೆ ಬಂದು ಹೋಗಿದ್ದರು. ಮೃತದೇಹವನ್ನು ಇಂದು ಬೊಮ್ಮಳಿಕೆಗೆ ತರುವ ಸಾಧ್ಯತೆಯ ಬಗ್ಗೆ ಕುಟುಂಬ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here