ಬೂಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ಜಾತ್ರೋತ್ಸವ ಆಮಂತ್ರಣ ಬಿಡುಗಡೆ

0

ಪುತ್ತೂರು : ತಾಲೂಕಿನ ಆರ್ಯಾಪು ಗ್ರಾಮದ ಬೂಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವಾಲಯದ ವಾರ್ಷಿಕ ಜಾತ್ರೋತ್ಸವ ಹಾಗೂ ನೇಮೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯವು ದೇವಾಲಯದ ಆವರಣದಲ್ಲಿ ನ.5 ರಂದು ನಡೆಯಿತು.
ಡಿ. 9 ಮತ್ತು 10 ಈ ಎರಡು ದಿನಗಳಲ್ಲಿ ನಡೆಯುವ ಕಾರ್ಯಕ್ರಮದ ಇದರ ಆಮಂತ್ರಣವನ್ನು ಶ್ರೀ ಕ್ಷೇತ್ರದ ತಂತ್ರಿಗಳಾದ , ಪ್ರೀತಮ್ ಪುತ್ತೂರಾಯರ ಹಾಗೂ ಕ್ಷೇತ್ರದ ಅಧ್ಯಕ್ಷ ಗಂಗಾಧರ ಅಮೀನ್ ಹೊಸಮನೆ ಬಿಡುಗಡೆಗೊಳಿಸಿ, ಜಾತ್ರೋತ್ಸವ ದ ರೂಪು ರೇಷೆ ಗಳನ್ನು ತಿಳಿಸಿ ಶುಭ ಹಾರೈಸಿದರು.

ಬ್ರಹ್ಮಕಲಶೋತ್ಸವದ ಅಧ್ಯಕ್ಷ ಸಿ ಟಿ ಸುರೇಶ್, ಕಾರ್ಯದರ್ಶಿ ಜಯಂತ್ ಶೆಟ್ಟಿ ಕಂಬಳತಡ್ಡ ಸಹಿತ ಸಮಿತಿಯ ಎಲ್ಲಾ ಪದಾಧಿಕಾರಿಗಳು ,ಸದಸ್ಯರು , ಅರ್ಚಕ ವೃಂದ ಹಾಗೂ ಗ್ರಾಮದ ಭಕ್ತಾಧಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here