ನ.6: ಕೆಂಪು ಕಲ್ಲು ಉತ್ಪಾದಕರ ಮತ್ತು ಮಾರಾಟಗಾರರ ಸಂಘದ ಪದಾಧಿಕಾರಿಗಳ ಪದಗ್ರಹಣ, ಅಶಕ್ತರಿಗೆ ಸಹಾಯಧನ ವಿತರಣೆ

0

ಪುತ್ತೂರು: ಕೆಂಪು ಕಲ್ಲು ಉತ್ಪಾದಕರ ಮತ್ತು ಮಾರಾಟಗಾರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಅಶಕ್ತರಿಗೆ ಸಹಾಯಧನ ವಿತರಣೆ ಕಾರ್ಯಕ್ರಮವು ನ.6 ರಂದು ಬೆಳಿಗ್ಗೆ 10 ರಿಂದ ಮಹಾವೀರ ವೆಂಚರ್‍ಸ್‌ನಲ್ಲಿ ನಡೆಯಲಿದೆ. ಕೆಂಪು ಕಲ್ಲು ಉತ್ಪಾದಕರ ಹಾಗೂ ಮಾರಾಟಗಾರರ ಸಂಘ ಪುತ್ತೂರು ವಲಯದ ಗೌರವಾಧ್ಯಕ್ಷ ಎನ್. ಎಸ್. ಅಬ್ದುಲ್ ಕುಂಞ ಉದ್ಘಾಟನೆ ನೆರವೇರಿಸಲಿದ್ದು, ಅಧ್ಯಕ್ಷ ಸುಧಾಕರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಪುತ್ತೂರು ಕೆಂಪು ಕಲ್ಲು ಉತ್ಪಾದಕರ ಹಾಗೂ ಮಾರಾಟಗಾರರ ಸಂಘದ ಸ್ಥಾಪಕಾಧ್ಯಕ್ಷ ಅಮರ್ ಸೊರಕೆ, ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲುಪಾಯ ಮಾಲಕರ ಸಂಘದ ಅಧ್ಯಕ್ಷ ಸತೀಶ್ ಆಚಾರ್ಯ, ಕಾರ್ಯದರ್ಶಿ ರವಿ ರೈ ಕೊಣಾಜೆ, ಕೋಶಾಧಿಕಾರಿ ರಾಮಣ್ಣ ಮುಗೆರೋಡಿ, ವಿಟ್ಲ ವಲಯ ಕೆಂಪು ಕಲ್ಲು ಉತ್ಪಾದಕರ ಹಾಗೂ ಮಾರಾಟಗಾರರ ಸಂಘದ ಅಧ್ಯಕ್ಷ ರಮೇಶ್ ವಿ, ಮುಡಿಪು ವಲಯದ ಅಧ್ಯಕ್ಷ ವಿಶ್ವನಾಥ ರೈ, ಬಂಟ್ವಾಳ ವಲಯದ ಅಧ್ಯಕ್ಷ ಮೋಹನ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here