ಬಪ್ಪಳಿಗೆಯ ಅಂಬಿಕಾ ಮಾಹಾವಿದ್ಯಾಲಯದಲ್ಲಿ ಸಕಾರಾತ್ಮಕ ಪತ್ರಿಕೋದ್ಯಮ ತರಗತಿ

0

ಸುದ್ದಿಯನ್ನು ಗ್ರಹಿಸುವುದಕ್ಕೆ ಚಾಣಾಕ್ಯತನ ಅಗತ್ಯ : ಗಣೇಶ ಪ್ರಸಾದ ಪಾಂಡೇಲು


ಪುತ್ತೂರು: ಸುದ್ದಿಯನ್ನು ಗ್ರಹಿಸುವುದು ಚಾಣಾಕ್ಯತನವನ್ನು ಬೇಡುವ ಕಲೆ. ನಮ್ಮ ಸುತ್ತಮುತ್ತ ನಡೆಯುವ ವಿಚಾರಗಳಲ್ಲಡಗಿದ ವಿಭಿನ್ನ ಆಯಾಮಗಳನ್ನು ಗುರುತಿಸಿ ಪ್ರಸ್ತುತಪಡಿಸಬೇಕು. ಹಾಗೆಂದು ಸಾಮಾನ್ಯ ವಿಚಾರಗಳನ್ನು ವಿಶಿಷವೆಂದು ವೈಭವೀಕರಿಸದೆ ಅಸಾಮಾನ್ಯ ವಿಷಯಗಳಿಗೆ ಪ್ರಾಮುಖ್ಯತೆಯನ್ನು ನೀಡಬೇಕು. ಎಲ್ಲೂ ಸುದ್ದಿಯಾಗದ ಮಾಹಿತಿಯನ್ನು ಜನರಿಗೆ ಮನಮುಟ್ಟುವಂತೆ ತಿಳಿಯಪಡಿಸಬೇಕು ಎಂದು ಹಿರಿಯ ಪತ್ರಕರ್ತ ಗಣೇಶ ಪ್ರಸಾದ ಪಾಂಡೇಲು ಹೇಳಿದರು.


ಅವರು ನಗರದ ನಟ್ಟೋಜ ಪೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ಸುಳ್ಯದ ರೂರಲ್ ಮಿರರ್ ಡಿಜಿಟಲ್ ಮಿಡಿಯಾದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಸಕಾರಾತ್ಮಕ ಪತ್ರಿಕೋದ್ಯಮ ತರಬೇತಿ ತರಗತಿಗಳ ನೆಲೆಯಲ್ಲಿ ಆಯೋಜಿಸಲಾಗುತ್ತಿರುವ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಕ್ರವಾರದಂದು ಮಾತನಾಡಿದರು.


ಯಾವುದೇ ಸುದ್ದಿಯನ್ನು ಮಾಧ್ಯಮದಲ್ಲಿ ಪ್ರಸ್ತುತಪಡಿಸುವ ಮೊದಲು, ಆ ಕುರಿತಾದ ಸಮಗ್ರ ಮಾಹಿತಿಯನ್ನು ಕಲೆಹಾಕಬೇಕು. ಬಾಯಿ ಮಾತಿನಿಂದ ಬಂದ ಸುದ್ದಿಯನ್ನು ಗಂಭೀರವಾಗಿ ಪರಿಗಣಿಸಿ, ಪ್ರಸಾರ ಮಾಡಿದರೆ ಅದು ಹಲವಾರು ಅನಾಹುತಗಳಿಗೆ ದಾರಿಮಾಡಿಕೊಡುತ್ತದೆ. ವಸ್ತುನಿ? ಹಾಗೂ ನಿಖರವಾಗಿ ಸುದ್ದಿಯನ್ನು ಬಿತ್ತರಿಸುವುದು ಪತ್ರಕರ್ತನ ಮೊದಲ ಆದ್ಯತೆಯಾಗಬೇಕು ಎಂದು ಹೇಳಿದರು.


ಅನುವಾದ ಮಾಡುವುದೂ ಒಂದು ಕಲೆ. ಪದದಿಂದ ಪದಕ್ಕೆ ಅನುವಾದ ಮಾಡಿದಲ್ಲಿ ಅದರ ಅರ್ಥವೇ ಬೇರೆಯಾಗಿ ಎಡವಟ್ಟುಗಳು ನಡೆಯುವ ಸಾಧ್ಯತೆಯಿದೆ. ಆದ್ದರಿಂದ ವಿ?ಯವನ್ನು ಅರ್ಥ ಮಾಡಿಕೊಂಡು ಭಾ?ಂತರ ಮಾಡಿದಾಗ ಹೆಚ್ಚು ಪರಿಣಾಮಕಾರಿಯಾಗಿ ವಿ?ಯ ಮಂಡಣೆ ಮಾಡಬಹುದು ಎಂದರು.


ರೂರಲ್ ಮಿರರ್ ಡಿಜಿಟಲ್ ಮಿಡಿಯಾದ ಸಂಸ್ಥಾಪಕ ಮಹೇಶ್ ಪುಚ್ಚಪಾಡಿ ಮಾತನಾಡಿ, ಸಮಾಜದಲ್ಲಿ ಕಂಡುಬರುವ ಋಣಾತ್ಮಕ ವಿಚಾರಗಳನ್ನು ಬದಿಗಿರಿಸಿ, ಧನಾತ್ಮಕ ಅಂಶಗಳನ್ನು ಪ್ರಸಾರ ಮಾಡುವ ಆಶಯ ಹೊಂದಿದ ರೂರಲ್ ಮಿರರ್ ಮಿಡಿಯಾದ ಯೋಜನೆಯು ಹೊಸ ಸಂಚಲನವನ್ನು ಮೂಡಿಸುತ್ತಿದೆ. ವಿದ್ಯಾರ್ಥಿಗಳು ಇಂತಹ ಅವಕಾಶವನ್ನು ಸದುಪಯೋಗಪಡಿಸಬೇಕು. ವಿದ್ಯಾರ್ಥಿ ಜೀವನದಿಂದಲೇ ಹೊಸತನವನ್ನು, ಸಕಾರಾತ್ಮಕತೆಯನ್ನು ಅಳವಡಿಸುವುದನ್ನು ಅರಿಯಬೇಕು ಎಂದರು.


ವಿದ್ಯಾರ್ಥಿನಿ ಶಿಲ್ಪ ಪ್ರಾರ್ಥಿಸಿ, ವಿದ್ಯಾರ್ಥಿನಿ ಅಕ್ಷಿತಾ ವಂದಿಸಿದರು. ಕಾಲೇಜಿನ ಪ್ರಾಚಾರ್ಯ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here