ವೇಗದ ನಡಿಗೆ ಸ್ಪರ್ಧೆ: ರಾಮಕುಂಜ ಆ.ಮಾ.ಶಾಲಾ ವಿದ್ಯಾರ್ಥಿ ವಿಲಾಸ್‌ಗೆ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ

0

ರಾಮಕುಂಜ: ಸರಸ್ವತಿ ವಿದ್ಯಾಮಂದಿರ ಬಿಹಾರ ಇಲ್ಲಿ ನಡೆದ 34ನೇ ವಿದ್ಯಾಭಾರತಿ ರಾಷ್ಟ್ರೀಯ ಕ್ರೀಡಾಕೂಟದ 17ರ ವಯೋಮಾನದ ಬಾಲಕರ 5000ಮೀ. ನಡಿಗೆ ಸ್ಪರ್ಧೆಯಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ವಿಲಾಸ್ ಗೌಡ ಪಿ., ಪ್ರಥಮ ಸ್ಥಾನ ಪಡೆದುಕೊಂಡು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ(SGFI)ಗೆ ಆಯ್ಕೆಯಾಗಿರುತ್ತಾರೆ.

ಈತ ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ನಿವಾಸಿ ಕೆ.ಎಸ್.ಪ್ರಶಾಂತ್‌ಕುಮಾರ್ ಹಾಗೂ ಶಶಿರೇಖಾ ಎನ್. ದಂಪತಿ ಪುತ್ರ. ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ್ ಹಾಗೂ ಮೂರ್ತಿಯವರು ತರಬೇತಿ ನೀಡಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್.ಟಿ, ವ್ಯವಸ್ಥಾಪಕರಾದ ರಮೇಶ್ ರೈ ಆರ್.ಬಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ., ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here