ರಾಷ್ಟ್ರ ಮಟ್ಟದ ಕರಾಟೆ-ವಿವೇಕಾನಂದ ಆ.ಮಾ ವಿದ್ಯಾರ್ಥಿನಿ ಅಭಿಜ್ಞಾ ಶಾಂಭವಿ ಎಸ್.ಜಿ.ಎಫ್.ಐಗೆ ಆಯ್ಕೆ

0

ಪುತ್ತೂರು: ವಿದ್ಯಾಭಾರತಿ ಸಂಯೋಜಿತ ಶಾಲೆಗಳ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯು ಅ 28,29, 30 ರಂದು ಮಧ್ಯಪ್ರದೇಶದ ದೇವಾಸ್‍ನಲ್ಲಿ ನಡೆಯಿತು. ಈ ಸ್ಪರ್ದೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. 


ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ:(14ರ ವಯೋಮಾನದ)6ನೇ ತರಗತಿಯ ಅಭಿಜ್ಞಾ ಶಾಂಭವಿ ಪ್ರಥಮ ಸ್ಥಾನ ದೊಂದಿಗೆ ಚಿನ್ನ ಪದಕ,6ನೇ ತರಗತಿ ಮಹತಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದಿರುತ್ತಾಳೆ. ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ (17ರ ವಯೋಮಾನದ) -10ನೇ ತರಗತಿಯ ಪ್ರಮಥ.ಎಂ.ಭಟ್ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದಿರುತ್ತಾನೆ. ಪ್ರಥಮ ಸ್ಥಾನ ಪಡೆದ ಅಭಿಜ್ಞಾ ಶಾಂಭವಿ ಎಸ್.ಜಿ.ಎಫ್.ಐ ಗೆ ಆಯ್ಕೆಯಾಗಿರುತ್ತಾಳೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಶಾಲಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here