ನ.10: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರದ ಶಂಕರ ವ್ರತ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ಕೃಷ್ಣ ಪ್ರದೋಷದಂದು ನಡೆಸಲು ಉದ್ದೇಶಿಸಿರುವ ಸಾರ್ವಜನಿಕ ಶ್ರೀ ವರದ ಸಂಕರ ವ್ರತವು ನ.10ರಂದು ದೇವಳದ ಗೋಪುರದಲ್ಲಿ ನಡೆಯಲಿದೆ.


ಸಂಜೆ ಗಂಟೆ 4ಕ್ಕೆ ಸಂಕಲ್ಪ, ಗಂಟೆ 5 ರಿಂದ ಕಥಾಶ್ರವಣ, 6ಕ್ಕೆ ಮಂಗಳಾರತಿ ನಡೆಯಲಿದೆ. ಶ್ರೀ ವರದ ಶಂಕರ ವ್ರತ ಪೂಜಾ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ಸೇವಾ ರಶೀದಿ ಪಡೆಯುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here