ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮೇಲ್ವಿಚಾರಣಾ ಸಮಿತಿಗೆ ನೂತನ ಸದಸ್ಯರ ನೇಮಕ

0

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಗಳ ಮೇಲ್ವಿಚಾರಣಾ ಸಮಿತಿಗೆ ಹೊಸ ಸದಸ್ಯರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಹಂತಹಂತವಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ ಪ್ರಕಾರ ಅಧಿಕಾರಿ/ ಅಧಿಕಾರೇತರ ಸದಸ್ಯರನ್ನು ಮತ್ತು ಹೆಚ್ಚುವರಿಯಾಗಿ ಮೂವರು ಸದಸ್ಯರುಗಳನ್ನು ಒಳಗೊಂಡಂತೆ ಮೇಲ್ವಿಚಾರಣಾ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಸತೀಶ್ ಕೂಜುಗೋಡು, ಲೋಲಾಕ್ಷ ಎನ್.ಎಚ್.ಮಲ್ಲಾರ, ಪವನ್ ಎಂ.ಡಿ. ವಾಲಗದಕೇರಿ, ಅಚ್ಚುತ ಗೌಡ ಆಲ್ಕಬೆ ಅವರನ್ನು ಸದಸ್ಯರಾಗಿ ನೇಮಕಗೊಳಿಸಲಾಗಿದೆ.

LEAVE A REPLY

Please enter your comment!
Please enter your name here