ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಹಳೆನೇರೆಂಕಿ ಶಾಲಾ ವಿದ್ಯಾರ್ಥಿಗಳ ಸಾಧನೆ

0

ಬಾಲಕರ ವಿಭಾಗದಲ್ಲಿ ಶಾಲೆಗೆ ಸಮಗ್ರ ಪ್ರಶಸ್ತಿ

  • ಜಯೇಶ್, ತನ್ವಿ ರಾಜ್ಯಮಟ್ಟಕ್ಕೆ ಆಯ್ಕೆ, ಮೇಘಶ್ರೀಗೆ ತೃತೀಯ ಸ್ಥಾನ

ರಾಮಕುಂಜ: ಮೂಡಬಿದ್ರೆಯಲ್ಲಿ ನಡೆದ ದ.ಕ.ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಹಳೆನೇರೆಂಕಿ ಸರಕಾರಿ ಉ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳು ಗಣನೀಯ ಸಾಧನೆ ತೋರಿದ್ದು ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಶಾಲೆಗೆ ಸಮಗ್ರ ಪ್ರಶಸ್ತಿ, ವೈಯಕ್ತಿಕ ಚಾಂಪಿಯನ್ ಶಿಪ್ ಲಭಿಸಿದೆ. ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.


ಶಾಲೆಯ 7ನೇ ತರಗತಿ ವಿದ್ಯಾರ್ಥಿ ಜಯೇಶ್ ಅವರು 200ಮೀ., 400 ಮೀ.,ಹಾಗೂ 6೦೦ ಮೀ.ಓಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 7ನೇ ತರಗತಿ ವಿದ್ಯಾರ್ಥಿನಿ ತನ್ವಿ ಕೆ., ಉದ್ದಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 7ನೇ ತರಗತಿ ವಿದ್ಯಾರ್ಥಿನಿ ಮೇಘಶ್ರೀ 600 ಮೀ.ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಸಮಗ್ರ ಪ್ರಶಸ್ತಿ:
ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಹಳೆನೇರೆಂಕಿ ಶಾಲೆಗೆ ಸಮಗ್ರ ಪ್ರಶಸ್ತಿ ಲಭಿಸಿದೆ. ಹಿರೆಬಂಡಾಡಿಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದ ಪ್ರಾಥಮಿಕ ಶಾಲಾ ಬಾಲಕರ ತಂಡ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಾಮಣ್ಣ ಗೌಡ ತರಬೇತಿ ನೀಡಿದ್ದಾರೆ. ಮುಖ್ಯಗುರು ವೈ.ಸಾಂತಪ್ಪ ಗೌಡ ಹಾಗೂ ಸಹಶಿಕ್ಷಕರು ಪ್ರೋತ್ಸಾಹ ನೀಡಿದ್ದರು.

LEAVE A REPLY

Please enter your comment!
Please enter your name here