ಕಡಬ ತಾಲೂಕು ಪಂಚಾಯತ್ ನಲ್ಲಿ ದೀಪ ಸಂಜೀವಿನಿ ಕಾರ್ಯಕ್ರಮ

0

ಕಡಬ: ಕಡಬ ತಾಲೂಕು ಪಂಚಾಯತ್ ನಲ್ಲಿ ದೀನ್ ದಯಾಳ್‌ ಅಂತ್ಯೋದಯ‌ ಯೋಜನೆ- ರಾಷ್ಟೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೀಪ ಸಂಜೀವಿನಿ ಕಾರ್ಯಕ್ರಮ ನ.9ರಂದು ನಡೆಯಿತು.


ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ, ಭವಾನಿಶಂಕರ್ ತ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೀಲಾವತಿ ಇವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಗ್ರಾಮೀಣ ಪ್ರದೇಶದಲ್ಲಿರುವ ಮಹಿಳೆಯರು ಮಾಡುತ್ತಿರುವ ಹಣತೆಗಳನ್ನು ಪ್ರದರ್ಶನ ಮತ್ತು ಮಾರಾಟ ಮಾಡುವುದರ ಮೂಲಕ ಆದಾಯ ಪಡೆಯಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ತಾಲೂಕು ಅಭಿಯಾನ ನಿರ್ವಹಣಾ ಘಟಕದ ನಳಿನಾಕ್ಷಿ, ವಲಯ ಮೇಲ್ವಿಚಾರಕಿ ನಳಿನಾಕ್ಷಿ, ಜಿ.ಪಿ.ಎಲ್.ಪಿ, ಅಸಿಸ್ಟೆಂಟ್ ನವ್ಯ, ಕುಮಾರಧಾರ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷೆ ಸುಜಾತ, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ಪುತ್ತೂರು, ಸಂಜೀವಿನಿ ಸದಸ್ಯರು, ತಾಲೂಕು ಪಂಚಾಯತ್ ಕಡಬ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here