ಪುತ್ತೂರು ಯೋಜನ ಕಚೇರಿಯಲ್ಲಿ ಮಧ್ಯವರ್ಜನ ಶಿಬಿರದ ಪೂರ್ವಬಾವಿ ಸಭೆ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಪುತ್ತೂರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ಇದರ ವತಿಯಿಂದ ಪುತ್ತೂರು ಯೋಜನ ಕಚೇರಿಯಲ್ಲಿ ಮಧ್ಯವರ್ಜನ ಶಿಬಿರದ ಪೂರ್ವ ತಯಾರಿ ಸಭೆ ನಡೆಸಲಾಯಿತು. ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ ,ಗಣ್ಯರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು.

ಶಿಬಿರದ ಗೌರವ ಅಧ್ಯಕ್ಷರಾಗಿ ಕಲ್ಲೇಗ ಭಾರತ್ ಹಾಲ್ ಅಧ್ಯಕ್ಷ ಸಂಜೀವ ನಾಯಕ್ ಅವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಹರೀಶ್ ಭಟ್ ಆಯ್ಕೆ ಮಾಡಲಾಯಿತು.

ತಾಲ್ಲೂಕು ಅಧ್ಯಕ್ಷ ಲೋಕೇಶ್ ಹೆಗ್ಡೆ, ಮಾಜಿ ಜಿಲ್ಲಾ ಅಧ್ಯಕ್ಷ ಸಾಜ ರಾಧಕೃಷ್ಣ ಅಲ್ವಾ ,ಮಾಜಿ ತಾಲ್ಲೂಕು ಅಧ್ಯಕ್ಷ ಮಹಾಬಲ ರೈ ವಲತಾಡ್ಕ,ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ,ಜನಜಾಗೃತಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಕೇಂದ್ರ ಒಕ್ಕೂಟ ಅಧ್ಯಕ್ಷ ಉದಯ ಕುಮಾರ್ ಆಚಾರ್ಯ, ಶಿಬಿರದ ಸಂಪನ್ಮೂಲ ವ್ಯಕ್ತಿ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಕಸಬಾ ಒಕ್ಕೂಟ ಅಧ್ಯಕ್ಷೆ ಗಾಯತ್ರಿ,ನಗರ ಸಭೆ ಸದಸ್ಯರು, ಊರಿನ ಗಣ್ಯರು ಸಂಘ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು, ಭಜನಾ ಮಂಡಳಿಯ ಅಧ್ಯಕ್ಷರು ಪದಾಧಿಕಾರಿಗಳು, ನವಜೀವನ ಸಮಿತಿ ಅಧ್ಯಕ್ಷರು ಸದಸ್ಯರು, ಜನಜಾಗೃತಿ ವಲಯದ ಅಧ್ಯಕ್ಷರು ಸದಸ್ಯರು ಒಕ್ಕೂಟ ಅಧ್ಯಕ್ಷರು ಪದಾಧಿಕಾರಿಗಳು ತಾಲ್ಲೂಕು ಯೋಜನಾಧಿಕಾರಿಗಳು ಮೇಲ್ವಿಚಾರಕರು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here