ಕ್ರೀಡೆ: ವಿವೇಕಾನಂದ ಪ. ಪೂ ಕಾಲೇಜಿನ ಧನುಷ್ ರಾಮ್ ಮತ್ತು ಅಶ್ವಿತ್ ಭಂಡಾರಿ‌ ರಾಜ್ಯ ಮಟ್ಟಕ್ಕೆ

0

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಚಾಮರಾಜನಗರದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಚೆಸ್ ಪಂದ್ಯಾಟಕ್ಕೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ರಾಮ್ ಆಯ್ಕೆಗೊಂಡಿದ್ದಾನೆ. ಈತನು ಪುತ್ತೂರು ಕರಿಯಾಲದ ದಿನೇಶ್ ಪ್ರಸನ್ನ ಮತ್ತು ಉಮಾ ದಂಪತಿ ಪುತ್ರ.

ಹಾಗೆಯೇ ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ದಾವಣಗೆರೆಯಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಖೋ ಖೋ ಪಂದ್ಯಾಟಕ್ಕೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಅಶ್ವಿತ್ ಭಂಡಾರಿ ಆಯ್ಕೆಯಾಗಿದ್ದಾನೆ. ಈತನು ಬಂಟ್ವಾಳ ಪುಣಚ ಗ್ರಾಮದ ಜಗದೀಶ್ ಭಂಡಾರಿ ಮತ್ತು ರವೀನ ಭಂಡಾರಿ ದಂಪತಿ ಪುತ್ರ.

LEAVE A REPLY

Please enter your comment!
Please enter your name here