ಪುತ್ತೂರು ಸಿಡಿಪಿಓ ಕಛೇರಿಯಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

0

ಪುತ್ತೂರು: ರಾಷ್ಟ್ರೀಯ ಕಾನೂನು ಸೇವೆಗಳ ದಿನದ ಅಂಗವಾಗಿ ಲೀಗಲ್ ಸರ್ವೀಸ್ ಡೇಯ ಪ್ರಯುಕ್ತ ಪುತ್ತೂರು ಸಿಡಿಪಿಓ ಕಚೇರಿಯಲ್ಲಿ ನಡೆದ ಕಾನೂನು ಮಾಹಿತಿ ಕಾರ್ಯಾಗಾರದಲ್ಲಿ ನ್ಯಾಯವಾದಿ ಹೀರಾ ಉದಯ್‌ರವರು ಉಚಿತ ಕಾನೂನು ನೆರವು ಹಾಗೂ ಲೋಕ ಅದಾಲತ್ ಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಿಡಿಪಿಓ ಶ್ರೀಲತಾ ರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಕೀಲೆ ಅಶ್ವಿನಿ ಹಾಗೂ ಇಲಾಖೆಯ ಪ್ರಮುಖರು ಉಪಸ್ಥಿತರಿದ್ದರು. ತಾಲೂಕು ಉಚಿತ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿಗಳಾದ ಜ್ಯೋತಿ ಹಾಗೂ ಹರೀಶ್ ಸಹಕರಿಸಿದರು.


LEAVE A REPLY

Please enter your comment!
Please enter your name here