ವಸ್ತ್ರ ವಿತರಣಾ ಕಾರ್ಯಕ್ರ‌ಮ – ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಸಮಾಲೋಚನೆ

0

ಪುತ್ತೂರು: ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನ.13ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ‌ನಡೆಯಲಿರುವ ವಸ್ತ್ರ ವಿತರಣೆ ಹಾಗೂ ಸಹಭೋಜನ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಸೇರುವ ನಿರೀಕ್ಷೆ ಇದ್ದು ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿಯವರು ಟ್ರಾಫಿಕ್ ಇನ್ಸ್ ಪೆಕ್ಟರ್ ಉದಯ ರವಿ ಅವರ ಜೊತೆ ಸಮಾಲೋಚನೆ ನಡೆಸಿದರು. ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಇನ್ಸ್ ಪೆಕ್ಟರ್ ರವರು ಕಾರ್ಯಾಧ್ಯಕ್ಷರಿಂದ ಮಾಹಿತಿ ಪಡೆದುಕೊಂಡರು. 50 ಸಾವಿರಕ್ಕೂ‌ ಮಿಕ್ಕಿ‌ ಜನರು ಕಾರ್ಯಕ್ರಮದಲ್ಲಿ‌ ಭಾಗವಹಿಸುವ ಕಾರಣ ನಗರದಲ್ಲಿ ಟ್ರಾಫಿಕ್ ಜಾಮ್ ಆಗುವ ಸಂಭವವಿದ್ದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸುದೇಶ್ ಶೆಟ್ಟಿಯವರು ಮನವಿ ಮಾಡಿದರು.

LEAVE A REPLY

Please enter your comment!
Please enter your name here