ಸವಣೂರು ಪ.ಪೂ.ಕಾಲೇಜಿನಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ ಬಗ್ಗೆ  ಕಾನೂನು ಮಾಹಿತಿ 

0

ಸವಣೂರು: ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಕಡಬ  ತಾಲೂಕು ಜನ ಜಾಗೃತಿ ವೇದಿಕೆಯ ವತಿಯಿಂದ ಬಾಲ್ಯವಿವಾಹ ನಿಷೇಧ ಕಾಯ್ದೆ ಬಗ್ಗೆ  ಕಾನೂನು ಮಾಹಿತಿ ಶಿಬಿರ ನ.9ರಂದು ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕಡಬ ತಾಲೂಕು ಜನ ಜಾಗೃತಿ ವೇದಿಕೆಯ ಅಧ್ಯಕ್ಷ ,ನ್ಯಾಯವಾದಿ ಮಹೇಶ್ ಕೆ ಸವಣೂರು  ಮಾತನಾಡಿ, ಬಾಲ್ಯ ವಿವಾಹ ಕಾಯಿದೆ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು.ಒಬ್ಬ ವ್ಯಕ್ತಿಯ ವ್ಯಕ್ತಿ ಸ್ವಾತಂತ್ರ್ಯಕ್ಕೆ ದಕ್ಕೆ ಬಂದಾಗ ಕಾನೂನಿನ ಮೂಲಕ ರಕ್ಷಣೆ ನೀಡುತ್ತದೆ ಎಂದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲ  ಹರಿಶಂಕರ ಭಟ್ ವಹಿಸಿದ್ದರು.ವೇದಿಕೆಯಲ್ಲಿ ಉಪನ್ಯಾಸಕ ರಾಜೀವ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ  ಉಪನ್ಯಾಸಕಿ ಲಾವಣ್ಯ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here