ಕಬಕ ಶ್ರೀ ಅಡ್ಯಲಾಯ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಜಾತ್ರೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

0

ಪುತ್ತೂರು: ಕಬಕ ಅಡ್ಯಾರಗೋಳಿ ಶ್ರೀ ಅಡ್ಯಲಾಯ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ನಡೆಯಲಿರುವ 10ನೇ ವರುಷದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯು ಗೌರವಾಧ್ಯಕ್ಷರಾದ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತುರವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ನಡೆಯಿತು.

ನೇಮೋತ್ಸವವನ್ನು‌ ಅತ್ಯಂತ ವಿಜ್ರಂಭಣೆಯಿಂದ ನಡೆಸುವುದಾಗಿ ಈ ಸಂದರ್ಭದಲ್ಲಿ ತೀರ್ಮಾನಿಸಲಾಯಿತು. ವೇ.ಮೂ. ಶ್ರೀಧರ ಭಟ್ ಕಬಕ,‌ ಸಮಿತಿ ಕಾರ್ಯದರ್ಶಿ ರವೀಂದ್ರ ಮೇಲಂಟ, ಜಿನ್ನಪ್ಪ ಪೂಜಾರಿ, ವಿಶ್ವನಾಥ ಒಡ್ಯ, ಜಯರಾಮ ನೆಕ್ಕರೆ, ಶ್ರೀ ಮಹಾದೇವಿ ಯುವಕ ಮಂಡಲ, ಹಾಗೂ ಯುವತಿ ಮಂಡಲದ ಸದಸ್ಯರು ಸೇರಿದಂತೆ ಹಲವಾರು ಭಕ್ತಾಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here