ಪುತ್ತೂರು: ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನ.12 ಮತ್ತು ನ.13ರಂದು ದೀಪಾವಳಿ ಉತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
![](https://puttur.suddinews.com/wp-content/uploads/2023/11/d8c18266-5d06-4f4b-8286-a175276648d9.jpg)
ನ.12ರಂದು ಸಂಜೆ 7ಕ್ಕೆ ಬಲೀಂದ್ರ ಪೂಜೆ ನಡೆಯಲಿದೆ. ನ.13ರಂದು ಬೆಳಿಗ್ಗೆ 9 ರಿಂದ ವ್ಯಾಘ್ರ ಚಾಮುಂಡಿ ಹಾಗೂ ರುದ್ರ ಚಾಮುಂಡಿ ದೈವಗಳಿಗೆ ತಂಬಿಲ ಸೇವೆ ನಡೆಯಲಿದೆ. ಭಕ್ತಾದಿಗಳು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.