ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಎಇಇ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

0

ಬೆಳ್ತಂಗಡಿ: ಬೆಳ್ತಂಗಡಿ ಮೆಸ್ಕಾಂ ಉಪವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶಿವಶಂಕರ್ ಅವರು ಮೆಸ್ಕಾಂ ಪುತ್ತೂರು ಕುಂಬ್ರ ಗ್ರಾಮಾಂತರ ಉಪವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ. ಬೆಳ್ತಂಗಡಿ ಮೆಸ್ಕಾಂ ಉಪವಿಭಾಗಕ್ಕೆ 1997ರಲ್ಲಿ ಕಿರಿಯ ಎಂಜಿನಿಯರ್ ಆಗಿ ನೇಮಕಗೊಂಡ ಅವರು ಬಳಿಕ 2೦೦೦ದಿಂದ 2೦೦4ರವರೆಗೆ ವೇಣೂರು ಶಾಖೆಯಲ್ಲಿ ಕಿರಿಯ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸಿದ್ದರು. ನಂತರ ಸಹಾಯಕ ಎಂಜಿನಿಯರ್ ಆಗಿ ಬಡ್ತಿಗೊಂಡು ಬೆಳ್ತಂಗಡಿ ಉಪ ವಿಭಾಗಕ್ಕೆ ವರ್ಗಾವಣೆಗೊಂಡಿದ್ದರು. ಇದೇ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಸಂದರ್ಭ 2016ರಲ್ಲಿ ಅವರು ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಬಡ್ತಿಗೊಂಡು ಬೆಳ್ತಂಗಡಿಯಲ್ಲೇ ಮುಂದುವರಿದ್ದರು. ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 26 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಇವರು ಬೆಳ್ತಂಗಡಿ ತಾಲೂಕಿನ ತೀರಾ ಗ್ರಾಮೀಣ ಪ್ರದೇಶಗಳಿಗೆ, ಗುಡ್ಡಗಾಡು ಪ್ರದೇಶಗಳಿಗೆ ಸರಕಾರದಿಂದ ಮಂಜೂರಾದ ವಿದ್ಯುತ್ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನವಾಗುವಲ್ಲಿ ಶ್ರಮ ವಹಿಸಿ ಗ್ರಾಹಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಉಜಿರೆ ಉಪ ವಿಭಾಗದ ಎಇಇ ಕ್ಲೆಮೆಂಟ್ ಬೆಂಜಮಿನ್ ಬ್ಯಾಗ್ಸ್ ಅವರನ್ನು ನೇಮಿಸಲಾಗಿದ್ದು, ಅವರಿಗೆ ಬೆಳ್ತಂಗಡಿ ಹಾಗೂ ಉಜಿರೆ ವಿಭಾಗದ ಜವಾಬ್ದಾರಿ ನೀಡಲಾಗಿದೆ.

LEAVE A REPLY

Please enter your comment!
Please enter your name here