ಕಬಡ್ಡಿ ಪಂದ್ಯಾಟ: ಶಶಾಂಕ್ ವೀರಮಂಗಲ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯ ನಿಕಟಪೂರ್ವ ವಿದ್ಯಾರ್ಥಿ, ಪ್ರಸ್ತುತ ಕೊಂಬೆಟ್ಟು ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗದ 8ನೇ ತರಗತಿಯಲ್ಲಿ ಕಲಿಯುತ್ತಿರುವ ಶಶಾಂಕ್ ಮಂಡ್ಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 14ರ ವಯೋಮಾನದ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿ, ಉತ್ತಮ ಹಿಡಿತಗಾರ ಮತ್ತು ದಾಳಿಗಾರ ಎಂಬ ಪ್ರಶಸ್ತಿಗೆ ಭಾಜನರಾಗಿ ರಾಜ್ಯಮಟ್ಟದ ತಂಡಕ್ಕೆ ಆಯ್ಕೆಯಾಗಿದ್ದಾರೆ. ಮೈಸೂರು ವಿಭಾಗ ಮಟ್ಟದಲ್ಲಿ ದಕ್ಷಿಣ ಕನ್ನಡ ತಂಡ ರನ್ನರ್ಸ್ ಆಗಿ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ವೀರಮಂಗಲ ಶಾಲಾ ಮುಖ್ಯ ಗುರು ತಾರಾನಾಥ ಸವಣೂರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here