ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್‌ಗೆ ಅಪ್ರಮೇಯ ಪಿ.ಎನ್. ಆಯ್ಕೆ

0

ಪುತ್ತೂರು: ತನ್ನ ಅಪಾರ ಜ್ಞಾಪಕ ಶಕ್ತಿಯಿಂದ ಎರೂಡುವರೆ ವರ್ಷದ ಅಪ್ರಮೇಯ ಪಿ.ಎನ್. ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್‌ಗೆ ಆಯ್ಕೆಯಾಗಿದ್ದಾರೆ. ಪುತ್ತೂರಿನ ಪ್ರವೀಣ್ ನಾಯಕ್ ಮತ್ತು ಅಕ್ಷತಾ ದಂಪತಿ ಪುತ್ರರಾದ ಅಪ್ರಮೇಯ ಯಾವುದೇ ವಸ್ತುವನ್ನು ಒಮ್ಮೆ ನೋಡಿದರೆ ಬಲು ಬೇಗನೆ ನೆನಪಿನಲ್ಲಿ ಇಟ್ಟುಕೊಳ್ಳುತ್ತಾನೆ. ಕನ್ನಡ ವರ್ಣಮಾಲೆ ಮತ್ತು ಇಂಗ್ಲಿಷ್ ವರ್ಣಮಾಲೆ, ಭಾರತದ 28 ರಾಜ್ಯಗಳು, ಮುಖ್ಯಮಂತ್ರಿಗಳ ಹೆಸರುಗಳು, ಪಂಚಭೂತಗಳು, ಕಾಲಗಳು, ತಿಂಗಳುಗಳು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ರಾಶಿಚಕ್ರ ಚಿಹ್ನೆಗಳು, ಕೆಲವು ಜಿಕೆ ಪ್ರಶ್ನೋತ್ತರಗಳು, 1ರಿಂದ10 ಅಂಕೆಗಳನ್ನು 4 ಭಾಷೆಗಳಲ್ಲಿ, ದೇಹದ ಭಾಗಗಳು, ಬಣ್ಣಗಳು, ಹಣ್ಣುಗಳು, ತರಕಾರಿಗಳು, ಪ್ರಾಣಿಗಳು, ಸೌರವ್ಯೂಹದ ಗ್ರಹಗಳು ಮುಂತಾದ ಬಹುಮುಖ ವಿಷಯಗಳಲ್ಲಿ ಅವರ ಅತ್ಯುತ್ತಮವಾದ ಜ್ಞಾಪಕ ಶಕ್ತಿಯನ್ನು ನೋಡಿ, ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ ಸಂಸ್ಥೆ ಹೆಮ್ಮೆಯಿಂದ ಪ್ರಶಂಸಿಸಿ ಗೌರವಿಸಿದೆ.

LEAVE A REPLY

Please enter your comment!
Please enter your name here