ವಿಕಲಚೇತನರ ಕಲ್ಯಾಣಾಧಿಕಾರಿ ಗೋಪಾಲಕೃಷ್ಣ, ನೋಡೆಲ್ ಅಧಿಕಾರಿ ಭಾರತೀ ಜೆ.ಎ.ರವರಿಗೆ ವಿಕಲಚೇತನರ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಅಭಿನಂದನೆ

0

ಪುತ್ತೂರು: ಇತ್ತೀಚೆಗೆ ನಿವೃತ್ತಿ ಹೊಂದಿದ ದ.ಕ ಜಿಲ್ಲಾ ವಿಕಲಚೇತನರ ಕಲ್ಯಾಣ ಅಧಿಕಾರಿ ಗೋಪಾಲಕೃಷ್ಣ ಮತ್ತು ವಿಕಲಚೇತನರ ನೋಡೆಲ್ ಅಧಿಕಾರಿ ಭಾರತೀ ಜೆ.ಎ.ರವರಿಗೆ ವಿಕಲಚೇತನರ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು, ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ ವತಿಯಿಂದ ಪುತ್ತೂರು ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್. ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿ ಡಾ. ಆಶಾಜ್ಯೋತಿ ಕೆ, ಪುತ್ತೂರು/ಕಡಬ ತಾಲೂಕಿನ ವಿಕಲಚೇತನರ ನೋಡೆಲ್ ಅಧಿಕಾರಿ ಮಂಗಳಾ ಕಾಳೆ, ಪುತ್ತೂರು ತಾಲೂಕು ವಿಕಲಚೇತನರ ವಿವಿಧೋದ್ದೇಶ ಪುನರ್ವಸತಿ ಕಾರ್ಯಕಾರ್ಯಕರ್ತರಾದ ನವೀನ ಕುಮಾರ್, ಕಡಬ ತಾಲೂಕು ಪುನರ್ವಸತಿ ಕಾರ್ಯಕರ್ತ ಅಕ್ಷತಾ ಎ.ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನರಿಮೊಗರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಮೀರಮ್ಮ ಮತ್ತು ಒಳಮೊಗ್ರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಮೋಹನ್ ಕೆ.ಪಿ. ಅಭಿನಂದನಾ ಪತ್ರ ಓದಿದರು. ಕಾಣಿಯೂರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಧನಂಜಯ ಬಿ. ಪ್ರಾರ್ಥಿಸಿದರು. ಐತ್ತೂರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು. ಪುತ್ತೂರು ತಾಲೂಕಿನ 34ನೇ ನೆಕ್ಕಿಲಾಡಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಸೇಸಪ ಶಾಂತಿನಗರ ಸ್ವಾಗತಿಸಿದರು. ಪುತ್ತೂರು/ಕಡಬ ತಾಲೂಕಿನ ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರು ಅನಿಸಿಕೆ ವ್ಯಕ್ತಪಡಿಸಿದರು. ಬಿಳಿನೆಲೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ವಿಜಯ ಕುಮಾರ್ ಎರ್ಕ ವಂದಿಸಿದರು.

LEAVE A REPLY

Please enter your comment!
Please enter your name here